ಮಂಜೇಶ್ವರದಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿ

September 29, 2019
3:35 PM

ಕಾಸರಗೋಡು: ಅ.21 ರಂದು ನಡೆಯಲಿರುವ ಮಂಜೇಶ್ವರ ವಿಧಾನಸಭೆಯ ಉಪಚುನಾವಣೆಯಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು.

ಐದು ಕಡೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್ ಕೋನಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇನ್ನುಳಿದಂತೆ ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಎಸ್. ಸುರೇಶ್, ಎರ್ಣಾಕುಳಂ ಕ್ಷೇತ್ರದಲ್ಲಿ ಸಿ.ಜಿ. ರಾಜಗೋಪಾಲ್, ಅರೂರ್ ಕ್ಷೇತ್ರದಲ್ಲಿ ಕೆ.ಪಿ. ಪ್ರಕಾಶ್ ಬಾಬು ಅಭ್ಯರ್ಥಿಗಳಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೆ. ಸುರೇಂದ್ರನ್ ಪತ್ತನಂತಿಟ್ಟದಲ್ಲಿ ಮತ್ತು ಕೆ.ಪಿ. ಸುರೇಶ್ ಬಾಬು ಕೋಝಿಕೋಡ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೆ. ಸುರೇಂದ್ರನ್ ಕೇವಲ 89 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಅಂದು ನಷ್ಟವಾದ ಕ್ಷೇತ್ರವನ್ನು ಮರಳಿ ಪಡೆಯಲು ಈ ಬಾರಿ ರವೀಶ ತಂತ್ರಿ ಅವರನ್ನು ಪಕ್ಷ ಕಣಕ್ಕಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror