ಮಡಿಕೇರಿಯಲ್ಲಿ ಹುಚ್ಚ ವೆಂಕಟನ “ಹುಚ್ಚು” ಬಿಡಿಸಿದ ಸಾರ್ವಜನಿಕರು…!

August 29, 2019
10:10 PM

ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.

ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್‍ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.

ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror