ಮಡಿಕೇರಿಯಲ್ಲಿ ಹುಚ್ಚ ವೆಂಕಟನ “ಹುಚ್ಚು” ಬಿಡಿಸಿದ ಸಾರ್ವಜನಿಕರು…!

August 29, 2019
10:10 PM

ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.

ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್‍ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.

ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror