ಮಡಿಕೇರಿಯ ಉಪನ್ಯಾಸಕಿ ಕೆ. ಜಯಲಕ್ಷ್ಮಿಗೆ ಚಿನ್ಮಯ ಜ್ಞಾನಿ ಪ್ರಶಸ್ತಿ

October 29, 2019
4:10 PM

ಮಡಿಕೇರಿ: ಶಿಕ್ಷಣ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಮಹತ್ವದ ಸಾಧನೆಗಾಗಿ ಮಡಿಕೇರಿಯ ಉಪನ್ಯಾಸಕಿ ಕೆ. ಜಯಲಕ್ಷ್ಮಿ ಅವರಿಗೆ ಮೈಸೂರಿನ ಶರಣು ವಿಶ್ವಮಾನವ ಫೌಂಡೇಷನ್ ವತಿಯಿಂದ ಚಿನ್ಮಯಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೆ. ಜಯಲಕ್ಷ್ಮಿ ಅವರಿಗೆ ಬೇಲಿಮಠದ ಶಿವಾನುಭವ ಚಿರಮೂರ್ತಿ ಶ್ರೀ ಶಿವರುದ್ರ ಮಹಾಸ್ವಾಮಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎನ್.ತಿಮ್ಮಯ್ಯ, ಶರಣು ವಿಶ್ವವಚನ ಫೌಂಡೇಶನ್ ನ ಸಂಸ್ಥಾಪಕರಾದ ವಚನಕುಮಾರ ಸ್ವಾಮಿ, ರೂಪ ವಚನ ಕುಮಾರ ಸ್ವಾಮಿ ಹಾಜರಿದ್ದರು.

ಜಯಲಕ್ಷ್ಮಿ ಅವರು ಮಡಿಕೇರಿಯ ಸಂತ ಜೋಸೇಫರ ಪ.ಪೂ. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮರ್ಥ ಕನ್ನಡಿಗ ಸಂಸ್ಥೆಯ ಜಿಲ್ಲಾ ಸಂಚಾಲಕಿಯಾಗಿದ್ದಾರೆ. ಜಿಲ್ಲಾ ಜಾನಪದ ಪರಿಷತ್ ನ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ಜಯಲಕ್ಷ್ಮಿ ಕಥೆ, ಕವನ, ಪ್ರಬಂಧ ಸಾಹಿತ್ಯದಲ್ಲಿ ಸಕ್ರಿಯರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror