ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

September 29, 2019
9:30 PM

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆ ಮಾರಿಯಮ್ಮ ಕರಗಗಳ ನಗರ ಸಂಚಾರದ ಮೂಲಕ ದಸರಾ ಜನೋತ್ಸವಕ್ಕೆ ಚಾಲನೆ ದೊರೆತಿದೆ.

ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದ್ದು, ರಾಜರ ಆಳ್ವಿಕೆಯ ಕಾಲದಿಂದಲೇ ಈ ಆಚರಣೆ ನಡೆಯುತ್ತಾ ಬರುತ್ತಿದೆ. ಆಗಿನ ಕಾಲದಿಂದಲೂ ಮಡಿಕೇರಿಯಲ್ಲಿ ನೆಲೆಸಿರುವ ಗೌಳಿ ಸಮುದಾಯದ ಪೂಜಾರಿ ಮನೆತನದವರು ಈ ಕರಗೋತ್ಸವನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷ.

ಸೆ. 30 ರಿಂದ ಅ. 3ರ ವರೆಗೆ ಕರಗಗಳು ಸಂಪ್ರದಾಯದಂತೆ ನಗರ ಪ್ರದಕ್ಷಿಣೆ ಮಾಡಲಿರುವ ನಾಲ್ಕು ಕರಗಗಳು ವಿಜಯ ದಶಮಿಯಂದು ರಾತ್ರಿ ಮಡಿಕೇರಿ ರಾಜಬೀದಿಯಲ್ಲಿ ನಡೆಯುವ ಶೋಭಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ. ಅ.9 ರಂದು ಬೆಳಗ್ಗಿನ ಜಾವ ಬನ್ನಿ ಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ಕರಗಗಳು ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror