ಮಣಿಯೂರು ಶಾಸ್ತಾರ ದೇವಸ್ಥಾನ ಗರ್ಭಗುಡಿ ಶಿಲಾನ್ಯಾಸ

September 29, 2019
12:12 PM

ದೇಲಂಪಾಡಿ: ದೇಲಂಪಾಡಿ ಗ್ರಾಮದ ಮಣಿಯೂರು ಶ್ರೀ ಶಾಸ್ತಾರ ದೇವಸ್ಥಾನದ ದೇವರ ಗರ್ಭಗುಡಿಯ ಶಿಲನ್ಯಾಸ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಹಾಗೂ ಶಿಲ್ಪಿ ಬೆದ್ರಡ್ಕ ರಮೇಶ್ ಕಾರಂತರ ನೇತೃತ್ವದಲ್ಲಿ ದೇವರ ಗರ್ಭಗುಡಿಯ ಶಿಲನ್ಯಾಸ ನೆರವೇರಿತು.

ಪೂಜಾ ವಿಧಿವಿಧಾನಗಳಿಗೆ ಬ್ರಹ್ಮಶ್ರೀ ಶ್ರೀಧರ ತಂತ್ರಿ ಅವರೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ತ್ರಿವಿಕ್ರಮ ಮನೋಳಿತ್ತಾಯ ಸಹಕರಿಸಿದರು. ಭೂಮಿ ಪೂಜೆ, ಬ್ರಹ್ಮರಕ್ಷಸು , ನಾಗಬ್ರಹ್ಮನ ಸ್ಥಾನ ಬಾಲಾಲಯಕ್ಕೆ ಸ್ಥಳಾಂತರ ಹಾಗೂ ಇತರ ದೇವತಾ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೆಸರರಾದ ಚಿಕ್ಕಪ್ಪ ನ್ಯಾಕ್, ಮಣಿಯೂರು ಶ್ರೀ ಶಾಸ್ತಾರ ಜೀರ್ಣೋದ್ಧಾರ ಸಮಿತಿ ದೇಲಂಪಾಡಿಯ ಕಾರ್ಯಾಧ್ಯಕ್ಷ ಸದಾಶಿವ ರೈ‌ ಬೆಳ್ಳಿಪ್ಪಾಡಿ, ಖಜಾಂಜಿ ಗೋಪಾಲಕೃಷ್ಣ ಕುಂಜತ್ತಾಯ, ಜೀರ್ಣೋದ್ಧಾರ ಸಮಿತಿ ಸರ್ವ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror