ಮಳೆಕೊಯ್ಲು ಬಾವಿ ಉಳಿಸಿತು – ಕೃಷಿಕನ ಸುಲಭ ಪ್ರಯತ್ನ ಪರಿಣಾಮ ನೀಡಿತು

June 28, 2019
2:00 PM

ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು  ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.

Advertisement
Advertisement

ಕಳೆದ ಕೆಲವು ವರ್ಷಗಳಿಂದ ಅವರು ಮಳೆಕೊಯ್ಲು ಮಾಡುತ್ತಿದ್ದಾರೆ. ಯಾವುದೇ ದೊಡ್ಡ ಸಾಧನಗಳು ಇಲ್ಲದೆ, ತಮ್ಮ ಮನೆಯಲ್ಲೇ ಇರುವ ಸಾಮಾಗ್ರಿ ಬಳಸಿ ಮಳೆನೀರನ್ನು ಸೋಸಿ ಬಾವಿಗೆ ಬಿಡುತ್ತಿದ್ದಾರೆ. ಇದೀಗ ಬಾವಿಯಲ್ಲಿ ನೀರು ಉಳಿದಿದೆ. ಕಳೆದ 2 ವರ್ಷಗಳಲ್ಲಿ  ಬಿಟ್ಟಿ ನೆಡುನೀಲಂ ಅವರ ಈ ಯಶೋಗಾಥೆಯನ್ನು ವಿವಿಧ ಮಾಧ್ಯಮಗಳು ಫೋಕಸ್ ಮಾಡಿತ್ತು. ಮನೆಯ ಟೆರೇಸ್, ಛಾವಣಿ ನೀರನ್ನು 200 ಲೀಟರ್  ಬ್ಯಾರೆಲ್ ಮೂಲಕ ಸೋಸುವಂತೆ ಮಾಡಿ ಶುದ್ಧವಾದ ಬಳಿಕ ಬಾವಿಗೆ ಬಿಡುತ್ತಿದ್ದಾರೆ. ಹಿಂದೆಲ್ಲಾ ಸುಮಾರು ಮಾರ್ಚ್-ಎಪ್ರಿಲ್ ವೇಳೆಗೆ ಬಾವಿಯಲ್ಲಿ ನೀರು ಬರಿದಾಗುತ್ತಿತ್ತು. ಮಳೆಕೊಯ್ಲು ಮಾಡಿದ ಬಳಿಕ ನೀರು ಬತ್ತುವುದಕ್ಕೆ ತಡೆಯಾಗಿದೆ. ಅಲ್ಲದೆ ಬಾವಿಗಿಂತ ಕೆಳಗಿನ ಭಾಗದ ಕೆರೆಯಲ್ಲೂ ನೀರು ಹೆಚ್ಚಾಗಿದೆ ಎನ್ನುತ್ತಾರೆ ಬಿಟ್ಟಿ ನೆಡುನೀಲಂ.  ಬ್ಯಾರೆಲ್ ಒಳಗಡೆ ಜಲ್ಲಿ , ಮಸಿ ಹಾಗೂ ಮರಳನ್ನು  ಹಾಕಿ ನೀರು ಸೋಸುವಂತೆ ಮಾಡಿ ಬಾವಿಗೆ ಬಿಡುತ್ತಾರೆ. ಮಳೆಗಾಲ ಪೂರ್ತಿ ಈ ರೀತಿಯಾಗಿ ಬಾವಿಗೆ ನೀರು ಇಂಗುತ್ತದೆ.  ಈ ಮಾದರಿಯನ್ನು  ಎಲ್ಲಾ ಮನೆಗಳಲ್ಲೂ ಮಾಡಬಹುದಾಗಿದೆ.

 

ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ  ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ  ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( [email protected] ಅಥವಾ 9449125447 )  ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ. 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿನ ಆರೋಗ್ಯಕ್ಕೂ ಪ್ರಕೃತಿಯ ಸಮತೋಲನಕ್ಕೂ ಎಚ್ಚರಿಕೆಯ ಗಂಟೆ
January 19, 2026
7:41 AM
by: ಎ ಪಿ ಸದಾಶಿವ ಮರಿಕೆ
ಅಡಿಕೆ ಮಾರುಕಟ್ಟೆಯಲ್ಲಿ ಏನಿದು “ಡಿಸೆಂಬರ್‌ ಡಿಪ್‌” ? | ಮಾರುಕಟ್ಟೆ ಚೇತರಿಕೆ ಯಾವಾಗ..? ಬೆಳೆಗಾರರು ಏನು ಮಾಡಬಹುದು..?
December 18, 2025
10:11 PM
by: ಅರುಣ್‌ ಕುಮಾರ್ ಕಾಂಚೋಡು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆ ವಿಮೆ ಕತೆ ಏನು..? | ಬೆಳೆ ವಿಮೆ ಪಾವತಿಯಾಗದೇ ಇದ್ದರೆ ಸರ್ಕಾರದಿಂದ ಪರಿಹಾರ ಅಗತ್ಯವಿದೆ
December 7, 2025
8:20 PM
by: ಮಹೇಶ್ ಪುಚ್ಚಪ್ಪಾಡಿ
WHO ಆಗ್ನೇಯ ಏಷ್ಯಾದ 78 ನೇ ಅಧಿವೇಶನ ಮುಕ್ತಾಯ | ನಿರೀಕ್ಷೆಯಂತೆಯೇ ಅಡಿಕೆಯ ಉತ್ಪನ್ನದ ಮೇಲೆ ಬಿಗುವಿನ ಕ್ರಮದ ನಿರ್ಧಾರ
October 17, 2025
8:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror