ಮಳೆ…. ಮಳೆ …..! | ವಾಯುಭಾರ ಕುಸಿತ ಸರಿಯಾಗುವುದೇ….? | ಕಾದು ಕುಳಿತ ಚಂಡಮಾರುತ ದೂರವಾಗುವುದೇ…? |

May 9, 2020
4:18 PM

ಸುಳ್ಯ: ತಾಲೂಕಿನ ಕೆಲವು ಕಡೆ ಶನಿವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮಳೆಯಾಗಿದೆ. ಸುಬ್ರಹ್ಮಣ್ಯ ಬಳಿಯ ಕಲ್ಲಾಜೆ, ಗುತ್ತಿಗಾರಿನ ಕೆಲವು ಕಡೆ , ಏನೆಕಲ್ಲು ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ  ಹನಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬಂದಿತ್ತು.

ಹವಾಮಾನ ಮುನ್ಸೂಚನೆ ಪ್ರಕಾರ ಸುಳ್ಯ, ಸುಬ್ರಹ್ಮಣ್ಯ,  ಪುತ್ತೂರು, ಗುಂಡ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

 

ಬಂಗಾಳ ಕೊಲ್ಲಿಯ ಅಂಡಮಾನ್‌ ದ್ವೀಪದ ಬಳಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಇನ್ನೂ ಕೆಲವು ದಿನ ಮಳೆಯಾಗುವ ಮುನ್ಸೂಚನೆ ಇದೆ. ವಾಯುಭಾರ ಮತ್ತಷ್ಟು ಕುಸಿತವಾಗುತ್ತಿದ್ದು  ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದ್ದು ಹವಾಮಾನದ ಸ್ಪಷ್ಟ ಚಿತ್ರಣವು ಭಾನುವಾರ ಸಿಗಲಿದೆ. ಚಂಡಮಾರುತ ಉಂಟಾದರೆ  ಭಾರತದ ಪಶ್ಚಿಮ ಕರಾವಳಿಯಲ್ಲಿ  ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೇ.10  ಹಾಗೂ 11 ರಂದು ಮಳೆಯ ಸಾಧ್ಯತೆ ಹೆಚ್ಚಿದೆ.

ಆದರೆ ಭೂ ಮಧ್ಯೆ ರೇಖೆ ಗಿಂತ ಕೆಳ ಭಾಗದಲ್ಲಿ ಚಂಡಮಾರುತ ಉಂಟಾದರೆ  ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರಕ್ಕೆ ಹೆಚ್ಚಿನ ಸಂದರ್ಭ ಚಂಡಮಾರುತ ಪ್ರವೇಶಿಸುವುದಿಲ್ಲ. ಹೀಗಾಗಿ ವಾಯುಭಾರ ಕುಸಿತದಿಂದ ಮಳೆ ಮಾತ್ರವೇ ಬರಬಹುದು  ಎಂಬ ವಿಶ್ಲೇಷಣೆಯೂ ಇದೆ.

ಶನಿವಾರ ಮಧ್ಯಾಹ್ನ ಸುರಿದ ಮಳೆ:

 

ಈ ಬಾರಿ ಮುಂಗಾರು ಮಳೆ ನಿಗದಿತ ಸಮಯದಲ್ಲೇ ಆರಂಭವಾಗಲಿದೆ ಎನ್ನುವುದು  ಈಗಿನ ಅಂದಾಜು. ಜೂನ್ ಮೊದಲ ವಾರದಲ್ಲಿ  ಕೇರಳವನ್ನು  ಮುಂಗಾರು ಮಳೆ ಪ್ರವೇಶಿಸಿ ಉತ್ತಮ ಮಳೆಯಾಗಲಿದೆ. ಅದಾದ 4 ದಿನದಲ್ಲಿ ಕರ್ನಾಟಕ ಕರಾವಳಿ ಪ್ರವೇಶ ಮಾಡುವ ಮುಂಗಾರು  ಜೂನ್. 27 ರ ವೇಳೆಗೆ ನವದೆಹಲಿಗೆ ಪ್ರವೇಶವಾಗಬಹುದು , ಅದಕ್ಕೂ ಮುನ್ನ ಜೂ. 11 ರ ಸುಮಾರಿಗೆ ಮುಂಬೈ, ಕೋಲ್ಕತ್ತಾ ಮೊದಲಾದ ಕಡೆಗಳಲ್ಲಿ ಸುರಿಯಬಹುದು ಎನ್ನುವುದು ನಿರೀಕ್ಷೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್
March 17, 2026
2:50 PM
by: ಸಾಯಿಶೇಖರ್ ಕರಿಕಳ
ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ
March 17, 2026
7:14 AM
by: ದ ರೂರಲ್ ಮಿರರ್.ಕಾಂ
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror