ಮಾರ್ಚ್ 22 ರಂದು ಅರಂತೋಡಿನಲ್ಲಿ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ ಹಾಗೂ ಸನ್ಮಾನ ಸಮಾರಂಭ

March 9, 2020
9:57 AM

ಸುಳ್ಯ: ಅರಂತೋಡು ಆರ್ಟ್ಸ್ &ಸ್ಪೊರ್ಟ್ಸ್ ಕ್ಲಬ್‌ ಇದರ ಅಶ್ರಯದಲ್ಲಿ 3 ನೇ ವರ್ಷದ 30 ಗಜಗಳ 7 ಜನರ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಸಮಾರಂಭ ಮಾರ್ಚ್ 22 ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.

ಮಾರ್ಚ್ 22ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಸಮಾರಂಭವನ್ನು ಅರಂತೋಡು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಉದ್ಘಾಟಿಸಲಿದ್ದಾರೆ. ಅರಂತೋಡು ಸ್ಪೊರ್ಟ್ಸ್ ಕ್ಲಬ್ ಅಧ್ಯಕ್ಷ ರಿಯಾಝ್ ಸಣ್ಣಮನೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆತಿಥಿಯಾಗಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಕೊಡಂಕೇರಿ, ಸುಳ್ಯ ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ, ಅರಂತೋಡು ಕೃಷಿ ಪತ್ತಿನ ಸಹಕಾರಿ ಉಪಾಧ್ಯಕ್ಷ ದಯಾನಂದ ಕುರುಂಜಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ, ಅರಂತೋಡು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ವಿನೋದ್ ಕುಮಾರ್ , ಕುಸುಮಾಧರ ಅಡ್ಕಬಳೆ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ ಬನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ .ಡಿ.ಎಮ್ .ಸಿ.ಅಧ್ಯಕ್ಷ ಬಿ.ಹೆಚ್.ಪದ್ಮಯ್ಯ, ಅರಂತೋಡು ಸ್ಪೊರ್ಟ್ಸ್ ಕ್ಲಬ್ ಗೌರವಧ್ಯಕ್ಷ ಅನ್ವರ್ ಕೆ.ಎಮ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಕ್ರೀಡಾ ಪಟು ಸಾತ್ವಿ ಮೇರ್ಕಜೆ ಹಾಗೂ ರಾಷ್ಟ್ರ ಮಟ್ಟದ ಕಬಡ್ಡಿ ಮತ್ತು ಕೊಕ್ಕೋ ಕ್ರೀಡಾಪಟು ವರ್ಷ ಯು.ವಿ ಮತ್ತು ಜಿಲ್ಲಾ ಮಟ್ಟದ ಕ್ರೀಡಾ ಪಟು ಮಹಮ್ಮದ್ ಅರ್ಷಾದ್ ಗುಂಡಿ ಇವರನ್ನು ಸನ್ಮಾನಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭ ದಲ್ಲಿ ಅರಂತೋಡು ಸ್ಪೊರ್ಟ್ಸ್ ಕ್ಲಬ್ ಅಧ್ಯಕ್ಷ ರಿಯಾಝ್ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ರಾಜೀವ್ ಯೂತ್ ಪೌಂಡೇಶನ್ ರಾಜ್ಯಾಧ್ಯಕ್ಷರಾದ ಟಿ.ಎಮ್ .ಶಹೀದ್ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಆತಿಥಿಯಾಗಿ ಕ್ಯಾನ್ಸರ್ ತಜ್ಞ ಡಾ ರಘು, ಸುಳ್ಯ ಪಠೇಲ್ ಮೆಡಿಕಲ್ ಮಾಲಕ ಬದುರುದ್ದೀನ್ ಪಠೇಲ್, ತಾಜುದ್ದೀನ್ ಅರಂತೋಡು , ಅಬ್ದುಲ್ ಖಾದರ್ ಪಠೇಲ್, ದ.ಕ.ಎನ್ .ಎಸ್.ಯು.ಐ.ಉಪಾಧ್ಯಕ್ಷ ಶವಾದ್ ಗೂನಡ್ಕ, ಮಾಜಿ ಸೈನಿಕ ಫಸೀಲು ಅರಂತೋಡು, ಸುಳ್ಯ ತಾಲ್ಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕ ಅಬ್ದುಲ್ ಖಾದರ್ ಮೊಟ್ಟೆಂಗಾರ್ ಮೊದಲಾದವರು ಭಾಗವಹಿಸಲಿದ್ದಾರೆ.

ಪ್ರಥಮ ಬಹುಮಾನ 8080 ನಗದು ಮತ್ತು ಸೌಹಾರ್ದ ಟ್ರೋಫಿ ದ್ವಿತೀಯ ಬಹುಮಾನ 5050 ನಗದು ಮತ್ತು ಸೌಹಾರ್ದ ಟ್ರೋಫಿ ನೀಡಲಾಗುವುದು ಎಂದು ಸಂಘಟಕರಾದ ಶರಫುದ್ದೀನ್, ಮುನೀರ್ ಸಂಟ್ಯಾರ್, ರಿಯಾಝ್ ಸಣ್ಣಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror