ಮಿತ್ರಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ

October 29, 2019
3:25 PM

ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಏರ್ಪಡಿಸಲಾಯಿತು. ಮನೆಯ ಮುಂಭಾಗದಲ್ಲಿ ಬಲಿಯೇಂದ್ರ ಹಾಕಿ ಪೂಜೆ ನಡೆಸುವುದು ದೀಪಾವಳಿ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಮನೆಯ ಮುಂಭಾಗದಲ್ಲಿ ಹಾಕುವ ಬಲಿಯೇಂದ್ರವನ್ನು ಹೂವು, ಕಾಯಿ, ಬಳ್ಳಿ ಮತ್ತಿತರ ವಸ್ತುಗಳಿಂದ ಮನಮೋಹಕವಾಗಿ ಅಲಂಕರಿಸಲಾಗುತ್ತದೆ. ಅತ್ಯಂತ ಆಕರ್ಷಕವಾಗಿ ಅಲಂಕರಿಸಿದ ಬಲಿಯೇಂದ್ರಕ್ಕೆ ಬಹುಮಾನ ನೀಡಲಾಗುತ್ತದೆ.

Advertisement

ಮಿತ್ರ ಬಳಗದ ಸದಸ್ಯರು ಮನೆ ಮನೆ ತೆರಳಿ ಬಲಿಯೇಂದ್ರಕ್ಕೆ ಅಂಕ ನೀಡುತ್ತಾರೆ. ಅತೀ ಹೆಚ್ಚು ಅಂಕ ಗಳಿಸಿದ ಬಲಿಯೇಂದ್ರವನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.

ಆಕರ್ಷಕವಾಗಿ ಅಲಂಕರಿಸಿದ ಗೋವಿಂದ ನಾಯ್ಕ ದುಗಲಡ್ಕ ಇವರ ಮನೆಯ ಬಲಿಯೇಂದ್ರ ಪ್ರಥಮ ಬಹುಮಾನ ಪಡೆದುಕೊಂಡಿತು.

ಎರಡನೇ ಬಹುಮಾನ

ಪುಷ್ಪಾವತಿ ಆಚಾರ್ಯ ಮತ್ತು ಮನೆಯವರ ಬಲಿಯೇಂದ್ರ ಎರಡನೇ ಬಹುಮಾನ ಮತ್ತು ಶಿವರಾಮ ನಾಯ್ಕ ನೆಲ್ಲಿಬಂಗಾರಡ್ಕ ಕೇರ್ಪಳ ಇವರ ಮನೆಯ ಬಲಿಯೇಂದ್ರ ತೃತೀಯ ಸ್ಥಾನ ಪಡೆದಿದೆ ಎಂದು ಮಿತ್ರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.

ಮೂರನೇ ಬಹುಮಾನ

ಮಿತ್ರ ಬಳಗದ ವತಿಯಿಂದ ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಅಲಂಕಾರ ಸ್ಪರ್ಧೆ, ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror