ಮಿತ್ರಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ

October 29, 2019
3:25 PM

ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಬಲಿಯೇಂದ್ರ ಅಲಂಕಾರ ಸ್ಪರ್ಧೆ ಏರ್ಪಡಿಸಲಾಯಿತು. ಮನೆಯ ಮುಂಭಾಗದಲ್ಲಿ ಬಲಿಯೇಂದ್ರ ಹಾಕಿ ಪೂಜೆ ನಡೆಸುವುದು ದೀಪಾವಳಿ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಮನೆಯ ಮುಂಭಾಗದಲ್ಲಿ ಹಾಕುವ ಬಲಿಯೇಂದ್ರವನ್ನು ಹೂವು, ಕಾಯಿ, ಬಳ್ಳಿ ಮತ್ತಿತರ ವಸ್ತುಗಳಿಂದ ಮನಮೋಹಕವಾಗಿ ಅಲಂಕರಿಸಲಾಗುತ್ತದೆ. ಅತ್ಯಂತ ಆಕರ್ಷಕವಾಗಿ ಅಲಂಕರಿಸಿದ ಬಲಿಯೇಂದ್ರಕ್ಕೆ ಬಹುಮಾನ ನೀಡಲಾಗುತ್ತದೆ.

ಮಿತ್ರ ಬಳಗದ ಸದಸ್ಯರು ಮನೆ ಮನೆ ತೆರಳಿ ಬಲಿಯೇಂದ್ರಕ್ಕೆ ಅಂಕ ನೀಡುತ್ತಾರೆ. ಅತೀ ಹೆಚ್ಚು ಅಂಕ ಗಳಿಸಿದ ಬಲಿಯೇಂದ್ರವನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.

ಆಕರ್ಷಕವಾಗಿ ಅಲಂಕರಿಸಿದ ಗೋವಿಂದ ನಾಯ್ಕ ದುಗಲಡ್ಕ ಇವರ ಮನೆಯ ಬಲಿಯೇಂದ್ರ ಪ್ರಥಮ ಬಹುಮಾನ ಪಡೆದುಕೊಂಡಿತು.

ಎರಡನೇ ಬಹುಮಾನ

ಪುಷ್ಪಾವತಿ ಆಚಾರ್ಯ ಮತ್ತು ಮನೆಯವರ ಬಲಿಯೇಂದ್ರ ಎರಡನೇ ಬಹುಮಾನ ಮತ್ತು ಶಿವರಾಮ ನಾಯ್ಕ ನೆಲ್ಲಿಬಂಗಾರಡ್ಕ ಕೇರ್ಪಳ ಇವರ ಮನೆಯ ಬಲಿಯೇಂದ್ರ ತೃತೀಯ ಸ್ಥಾನ ಪಡೆದಿದೆ ಎಂದು ಮಿತ್ರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.

ಮೂರನೇ ಬಹುಮಾನ

ಮಿತ್ರ ಬಳಗದ ವತಿಯಿಂದ ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಅಲಂಕಾರ ಸ್ಪರ್ಧೆ, ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror