ಮುಂಗಾರಿನ ಸಿಂಚನಕ್ಕೆ “ಥಂಡರ್ ಲಿಲ್ಲಿ”

June 4, 2019
8:30 AM
ಪೆರ್ನಾಜೆ : ಮುಂಗಾರಿನ ಅಭಿಷೇಕಕ್ಕೆ ಮೆದುವಾಯಿತು ನೆಲವು ಧಗೆಯಾರಿದ ಹೃದಯದಲ್ಲಿ ಪುಟಿದೆದ್ದಿತು ಚೆಲುವು ಎಂದು ಕವಿಪುಂಗವರು ಹಾಡಿದ್ದೇನೊ ನಿಜ .
ಮೊದಲ ಮಳೆಯ ಹೂವಿದು ರಕ್ತ ಕೆಂಪು ಬಣ್ಣದ ಈ ಹೂವು ಬಲಿತಂತೆ ಗುಲಾಬಿ ಬಣ್ಣಕ್ಕೆ ತಿರುಗಿ ಅನಂತರ ಹಸಿರು ಬಣ್ಣಕ್ಕೆ ತಿರುಗುವ ಪ್ರಕ್ರಿಯೆ ನೋಡಲು ಆಹ್ಲಾದಕರ ಕೊನೆಗೆ ಅದರ ದಂಟಿನಂತೆಯೇ ಹೂಗಳು ಉದುರಿ ಹಸಿರಾಗಿ ಅದರಲ್ಲಿ ಹಳದಿ ಬಣ್ಣದ ಹಣ್ಣುಗಳಾಗುತ್ತವೆ.  ನೆಲದಡಿಯಲ್ಲಿ ಗೌಪ್ಯವಾಗಿ ಹುದುಗಿದ್ದ ಮಳೆ ಬಂದೊಡನೆ ಹೊರಬಂದು ನಗುವ ಈ ಹೂವಿನ ಸಸ್ಯಶಾಸ್ತ್ರ ಹೆಸರು ಹೆಕ್ಮಂಥಸ್ ಕೊಕ್ಸೀನಿಯಸ್  ಇದು ದಕ್ಷಿಣ ಆಫ್ರಿಕಾದಿಂದ ಬಂದ ಹೂವು.
ಈ ಅಪರೂಪದ ಹೂವಿಗೆ ಬ್ಲಡ್ ಲಿಲ್ಲಿ, ಗರುಡ ಲಿಲ್ಲಿ, ವಾಟರ್ ಲಿಲ್ಲಿ, ಸಿಡಿಲಮರಿ, ಥಂಡರ್ ಲಿಲ್ಲಿ, ತಿಂಗಳ ರಾಣಿ, ಮ್ಯಾಗ್ಮಿಲಿಯಾ, ಗದಾಪುಷ್ಪ ಎಂದು ಇದಕ್ಕೆ ಹಲವಾರು ನಾಮದೇಯಗಳು ಹೂಗಳಿಂದ ತುಂಬಿದ ಗೋಲಾಕಾರದ ಬೆಡಗಿ ಲಾವಣ್ಯವತಿಯಾಗಿ ರಸಿಕರ ಕಣ್ಮನಗಳಿಗೆ ಹರ್ಷೋಲ್ಲಾಸ ತುಂಬುತ್ತದೆ.
ವರ್ಷದಲ್ಲಿ ಒಮ್ಮೆ ಮಾತ್ರ ಅರಳುವ ಅಪರೂಪದ ಅತಿಥಿ ಸೌಂದರ್ಯ ಕಂಡರೆ ಅಸ್ತಿತ್ವ ಸಾರ್ಥಕವೆನಿಸುತ್ತದೆ ಇದು ಒಂದು ಸಂಯುಕ್ತ ಹೂವು ಪ್ರತಿ ಹೂವಿನಲ್ಲಿ ಸೂಜಿಯಾಕಾರದ ಏಳು ದಳಗಳಿರುತ್ತವೆ ಅದರ ತಳಭಾಗದಲ್ಲಿ ಆರು ತೆಳ್ಳಗಿನ ದಳಗಳಂತೆ ಇರುವ ಪುಷ್ಪಪಾತ್ರೆ ಇರುತ್ತದೆ ಈ ರೀತಿಯ ಹೂವುಗಳು ಒಂದೇ ಮುಷ್ಟಿಯಲ್ಲಿ ಅದುಮಿ ಹಿಡಿದಂತೆ ಗೋಲಾಕಾರವಾಗಿ ಇರುತ್ತವೆ ಮೊದಲ ಮಳೆಗೆ ಬಟ್ಟಬಯಲಲ್ಲಿ  ಭೂಮಿಯನ್ನು ಸೀಳಿ ಬಂದಂತೆ ಬಾಣದಂತಿರುವ ಮೊಗ್ಗು ಹೊರಚಿಮ್ಮಿ  ನಿಧಾನವಾಗಿ ಹೂವು ಅರಳುತ್ತದೆ ತದನಂತರ ಹೂವು ಬಾಡಿ ದಪ್ಪ ಎಲೆಯ ಹಸಿರು ಬಣ್ಣದಾಗಿದ್ದು ಬೇಸಿಗೆ ಕಾಲದಲ್ಲಿ ಹಳದಿ ಬಣ್ಣಕ್ಕೆ ತಿರುಗಿ ಗಿಡ ನಶಿಸುತ್ತದೆ (ಸಾಯುತ್ತದೆ) ನೆಲದಾಳದಲ್ಲಿ ಗಡ್ಡೆ ಇದ್ದು ಬಿಳಿ ಈರುಳ್ಳಿಯಂತೆ ಅಡಗಿರುತ್ತದೆ ವರ್ಷಗಳು ಕಳೆದಂತೆ ಗಡ್ಡೆಗಳ ಗಾತ್ರ ದೊಡ್ಡದಾಗುತ್ತದೆ. ಅಂತಹ ಗಿಡದ ಹೂವು ದೊಡ್ಡದಾಗಿರುತ್ತವೆ ಗಡ್ಡೆಯ ಸುತ್ತಲೂ ಮರಿ ಗಡ್ಡೆಗಳು ಗಡ್ಡೆಗಳಾಗುತ್ತದೆ.
ಗೊಂಚಲು ಗೊಂಚಲು ಹೂವುಗಳು ಅರಳಿ ನಿಂತಾಗ ಗಂಧರ್ವಲೋಕದ ಅಪ್ಸರೆಯನ್ನು ಕಂಡಂತಾಗುತ್ತದೆ ಇಂತಹ ಹೂವಿನ ಗಡ್ಡೆಗಳಿಗೆ ಬೇಸಿಗೆಯಲ್ಲಿ ನೀರಿನ ಅಗತ್ಯವೇ ಇರುವುದಿಲ್ಲ ದೇವರ ಆರಾಧನೆಗೂ ಬಳಸುವ ಹೆಣ್ಣಿನ ಮುಡಿಯನ್ನು ಅಲಂಕರಿಸುವ ಈ ಹೂವುಗಳಿಗೆ ಬೇಡಿಕೆ ಇಲ್ಲದ ದಿನವಿಲ್ಲ ಅಲಂಕಾರಿಕವಾಗಿಯೂ ಈ ಹೂಗಳನ್ನು ಬಳಸುತ್ತಾರೆ ಅನೇಕ ದಿನಗಳವರೆಗೆ ಬಾಡದಂತೆ ಆಗತಾನೆ ಗಿಡದಿಂದ ಕಿತ್ತಂತೆ ಕೆಲದಿನಗಳ ಕಾಲ ಇದನ್ನು ಕಾಯ್ದಿಡಲು ಸಾಧ್ಯ ಈಗೀಗ ಈ ಹೂವಿನ ಗಿಡಗಳು ಕಣ್ಮರೆಯಾಗುತ್ತಿವೆ ಬರಹಗಾರ ಕುಮಾರ್ ಪೆರ್ನಾಜೆ ಅವರ ಮನೆಯ ಸುತ್ತಲೂ ಅರಳಿ ನಗುವ ವಿಶಿಷ್ಟ ಹೂವನ್ನು ಹೆಚ್ಚಾಗಿ ಬೆಳೆಸಿ ರಕ್ಷಿಸುವತ್ತ ಗಮನ ಕೊಡಬೇಕಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror