ಮುಂದುವರಿದ ಬಿಜೆಪಿ ಜನಪ್ರತಿನಿಧಿಗಳ ರಾಜಿನಾಮೆ ಪರ್ವ: 318 ಮಂದಿ ರಾಜಿನಾಮೆ

August 24, 2019
9:44 PM

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ತಪ್ಪಿ ಹೋಗಿರುವುದನ್ನು ಪ್ರತಿಭಟಿಸಿ ಸುಳ್ಯ ಬಿಜೆಪಿ ನಡೆಸುತ್ತಿರುವ ಅಸಹಕಾರ ಚಳವಳಿ ಮುಂದುವರಿದಿದೆ.

ಬಿಜೆಪಿ ಜನಪ್ರತಿನಿಧಿಗಳ ರಾಜಿನಾಮೆಯೂ ಮುಂದುವರಿಯುತ್ತಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಎಪಿಎಂಸಿಗಳಿಗೆ ಆಯ್ಕೆಯಾದ ಬಿಜೆಪಿ ಜನಪ್ರತಿನಿಧಿಗಳು ತಮ್ಮ ರಾಜಿನಾಮೆ ಪತ್ರವನ್ನು ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಲ್ಲದೆ ಜನಪ್ರತಿನಿಧಿಗಳು ಕಚೇರಿಗಳಿಗೂ ತೆರಳುತ್ತಿಲ್ಲ. ಸುಳ್ಯ ವಿಧಾನಸಭಾ ವ್ಯಾಪ್ತಿಯಲ್ಲಿ ಇದುವರೆಗೆ ಒಟ್ಟು 318 ಮಂದಿ ಬಿಜೆಪಿ ಜನಪ್ರತಿನಿಧಿಗಳು ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.

ಶಾಸಕರಿಗೆ ಸಚಿವ ಸ್ಥಾನ ತಪ್ಪಿರುವುದರಿಂದ ಸುಳ್ಯ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಇದು ಸರಿ ಪಡಿಸುವವರೆಗೆ ಅಸಹಕಾರ ಚಳವಳಿಯೂ ಮುಂದುವರಿಯಲಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror