ಮೇಘಾಲಯದ ಬಾಲಕನಿಗೆ ಕನ್ನಡದಲ್ಲಿ 70 ಅಂಕ

Advertisement

ಸುಳ್ಯ:ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352 ಅಂಕಗಳೊಂದಿಗೆ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.

Advertisement

ಈತನಿಗೆ ಕನ್ನಡದಲ್ಲಿ 70 ಅಂಕಗಳು ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಒಂಭತ್ತನೇ ತರಗತಿಗೆ ಸೇರ್ಪಡೆಗೊಂಡ ಬಳಿಕ ಕನ್ನಡ ಅಭ್ಯಾಸ ಮಾಡಿದ್ದ. ಶಾಲೆಯ ಸಮೀಪದಲ್ಲಿಯೇ ಇರುವ ಅಡ್ಕಾರಿನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದಲ್ಲಿರುವ ಈತ ಮೇಘಾಲಯದ ಶಿಪ್ ಸ್ಯಾಂಗ್ರಿಯಾನ್ ಮತ್ತು ಸ್ಪಿಮ್ ಲಿಂಕೋಯ್ ಪುತ್ರ.

Advertisement
Advertisement

ಶಾಲೆಗೆ ಉತ್ತಮ ಫಲಿತಾಂಶ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 31 ರಲ್ಲಿ 30 ಮಂದಿ ಉತ್ತೀರ್ಣರಾಗಿ ಶೇ.97 ಫಲಿತಾಂಶ ದಾಖಲಾಗಿದೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂರು ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದಾತ್ ಹೆಚ್.ಯು.(554), ಕಾರ್ತಿಕ್.ಕೆ.ವಿ.(552), ಇಂದಿರೇಶ್(548) ಅತೀ ಹೆಚ್ಚು ಅಂಕ ಪಡೆದಿದ್ದಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಮೇಘಾಲಯದ ಬಾಲಕನಿಗೆ ಕನ್ನಡದಲ್ಲಿ 70 ಅಂಕ"

Leave a comment

Your email address will not be published.


*