ಮೇ 27  ರಿಂದ ಗೋವಾದಲ್ಲಿ  ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

May 25, 2019
9:03 PM

ಮಂಗಳೂರು: ಹಿಂದುತ್ವನಿಷ್ಠ ಸಂಘಟನೆಗಳ ರಾಷ್ಟ್ರವ್ಯಾಪಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಮೇ 27 ರಿಂದ ಜೂನ್ 8 ರವರೆಗೆ  ಗೋವಾದಲ್ಲಿ ‘ಅಷ್ಟಮ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಆಯೋಜಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಪ್ರಕಟಣೆ ತಿಳಿಸಿದೆ.

ಈ ಅಧಿವೇಶನಕ್ಕೆ ಭಾರತದ 26 ರಾಜ್ಯಗಳ ಸಹಿತ ಬಾಂಗ್ಲಾದೇಶದಿಂದ ಒಟ್ಟು 200 ಕ್ಕಿಂತ ಅಧಿಕ ಹಿಂದೂ ಸಂಘಟನೆಗಳ 800 ಕ್ಕಿಂತ ಹೆಚ್ಚು ಹಿಂದುತ್ವನಿಷ್ಠರು ಭಾಗವಹಿಸಲಿದ್ದಾರೆ. ಅಧಿವೇಶನಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಇಂದ 12 ಹಿಂದುತ್ವವಾದಿ, ನ್ಯಾಯವಾದಿ, ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ಈ ಎಲ್ಲ  ಸಂಘಟನೆಗಳ ಪದಾಧಿಕಾರಿಗಳು ಒಟ್ಟಾಗಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಸಮಾನಕೃತಿಯ ನೀಲನಕ್ಷೆಗನುಸಾರ ವರ್ಷವಿಡೀ ಉಪಕ್ರಮ ಮತ್ತು ಆಂದೋಲನದ ದಿಕ್ಕನ್ನು ನಿರ್ಧರಿಸಲಾಗುವುದು ಎಂಬ ಮಾಹಿತಿಯನ್ನು ಹಿಂದೂ ಜನಜಾಗೃತಿ ಸಮಿತಿಯು  ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.

 ಕೇಂದ್ರದಲ್ಲಿ  ಹೊಸ ಸರಕಾರದ ಸ್ಥಾಪನೆಯ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಸಮಾನ ನಾಗರಿಕ ಕಾನೂನು, ಕಲಂ 320 ರದ್ದು ಮಾಡುವುದು, ಗೋ ಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪುನರ್ ನಿರ್ಮಾಣ ಇತ್ಯಾದಿ ಹಿಂದೂಗಳ ಕಳೆದ ಅನೇಕ ವರ್ಷಗಳಿಂದ ನೆನೆಗುದಿಯಲ್ಲಿದ್ದ  ಸಮಸ್ಯೆಗಳ ಮೇಲೆ ವಿಚಾರ ವಿನಿಮಯ ಮಾಡಿ ಸರಕಾರಕ್ಕೆ ನಿರ್ದಿಷ್ಟ ಕ್ರಮಕೈಗೊಳ್ಳುವ ದೃಷ್ಟಿಯಿಂದ ಸಂಘಟನಾತ್ಮಕ ಪ್ರಯತ್ನಗಳ ದೃಢನಿರ್ಧಾರವನ್ನು ಈ ಅಧಿವೇಶನದ ಮೂಲಕ ಮಾಡಲಾಗುವುದು. ಇದರೊಂದಿಗೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದ ಹಿಂದೂಗಳ ರಕ್ಷಣೆಯ ಸಂದರ್ಭದಲ್ಲಿಯೂ ಚರ್ಚಿಸಲಾಗುವುದು ಎಂದು ಪ್ರಕಟಣೆಯಲ್ಲಿ  ಜಿಲ್ಲಾ ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕಾರ  ಚಂದ್ರ ಮೊಗೇರ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror