ಮೇ.5: ಅಂಚೆ – ಕುಂಚ ಸ್ಪರ್ಧೆ ಪುರಸ್ಕಾರ ವಿತರಣಾ ಸಮಾರಂಭ

May 2, 2019
10:11 PM

ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ 17 ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಣಾ ಸಮಾರಂಭವು ಮೇ.5 ರಂದು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ ಜೈನ್ ತಿಳಿಸಿದ್ದಾರೆ.

Advertisement
Advertisement
Advertisement

ಚಲನಚಿತ್ರ ಕಲಾವಿದ ಡಾ. ಮುಖ್ಯಮಂತ್ರಿ ಚಂದ್ರು ಪುರಸ್ಕಾರ ವಿತರಿಸುವರು. ಚಿತ್ರ ಕಲಾವಿದ ಗಂಜೀಫ ರಘುಪತಿ ಭಟ್ ಶುಭಾಶಂಸನೆ ಮಾಡುವರು.ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಅಂಚೆ ಕಾರ್ಡಿನಲ್ಲಿ ಕುಂಚವಾಡಿಸಿ ಆಕರ್ಷಕ ಚಿತ್ರಗಳನ್ನು ರಚಿಸುವ ರಾಜ್ಯ ಮಟ್ಟದ ಸ್ಪರ್ಧೆಯೇ ಅಂಚೆ-ಕುಂಚ ಸ್ಪರ್ಧೆ. ಕಳೆದ 17 ವರ್ಷಗಳಿಂದ ಈ ಸ್ಪರ್ಧೆ ನಡೆಸುತ್ತಿದ್ದು ಈ ವರೆಗೆ 2,09,685 ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಸಮಾರಂಭದ ಕೊನೆಯಲ್ಲಿ ಕುಂಚ-ಗಾನ-ನೃತ್ಯ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
October 2, 2023
8:59 PM
by: ದ ರೂರಲ್ ಮಿರರ್.ಕಾಂ
ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |
October 2, 2023
7:17 PM
by: ದ ರೂರಲ್ ಮಿರರ್.ಕಾಂ
ಸ್ವಚ್ಛತಾ ಅಭಿಯಾನದ ನಡುವೆ ರಸ್ತೆ ಜಾಗೃತಿಯ ಕೆಲಸ ಮಾಡಿದ ಯುವಕರು | ಇಲಾಖೆ ಗಮನಿಸಬೇಕಾದ ಪ್ರದೇಶ ಇದು..! |
October 2, 2023
6:43 PM
by: ದ ರೂರಲ್ ಮಿರರ್.ಕಾಂ
ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾಪ | ಗ್ಯಾರಂಟಿಗಳಿಂದ ಬಂದ ಮರ್ಯಾದಿ ಮದ್ಯದಂಗಡಿ ಪರವಾನಿಗೆ ಮೂಲಕ ಕಳೆದುಕೊಳ್ಳದಿರಿ | ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ
October 2, 2023
6:37 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror