ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ

April 6, 2019
7:25 AM

ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ

Advertisement
Advertisement

ಮೂಡಿಗೆರೆ: ಭಾರತೀಯ ಸೈನಿಕರ ಸಾಧನೆಯನ್ನು ಚುನಾವಣೆಯ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರ ದಿಕ್ಕು ತಪ್ಪಿಸುವ ಯತ್ನ ನಡೆಸುತ್ತಿದ್ದು ಇದರಿಂದಲೇ ಬಿಜೆಪಿಯ ಪಥನದ ಹಾದಿ ಪ್ರಾರಂಭವಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೈತ್ರಿ ಪಕ್ಷದ ಅಭ್ಯರ್ಥಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ವಾತಂತ್ರ್ಯದ ಬಳಿಕ ದೇಶಕ್ಕೆ ಕಾಡದ ಅಭದ್ರತೆಯು, ಕಳೆದ ಐದು ವರ್ಷಗಳಿಂದ ಕಾಡ ತೊಡಗಿದೆ. ಚುನಾವಣೆಯಲ್ಲಿ ವಾಮ ಮಾರ್ಗವನ್ನು ಅನುಸರಿಸುವ ಯತ್ನವನ್ನು ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ ಮಾಡುವ ಘೋಷಣೆ ಹೊರಡಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ನಾನು ಯಾವುದನ್ನೂ ಲೆಕ್ಕಿಸದೇ ಸಾಲಮನ್ನಾವನ್ನು ಜಾರಿಗೊಳಿಸಿದೆ. ರೈತರು ಹಾಗೂ ಕಾಫಿ ಬೆಳೆಗಾರರ ಸಮಸ್ಯೆಯನ್ನು ಬಿಜೆಪಿಯಾಗಲೀ, ನರೇಂದ್ರ ಮೋದಿಯಾಗಲೀ ಎಂದಿಗೂ ಆಲಿಸಿಲ್ಲ. ರಾಜ್ಯ ಸರ್ಕಾರ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ ಪರ ಮಾಡಿದ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ದೂರಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ.ಜಯಮಾಲಾ ಮಾತನಾಡಿ, ‘ಸಂಸದೆ ಶೋಭಾ ಕರಂದ್ಲಾಜೆ ಅವರು 5 ವರ್ಷದಲ್ಲಿ ಕ್ಷೇತ್ರದತ್ತ ತಲೆ ಹಾಕಿರಲಿಲ್ಲ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬೆಳೆಗಾರರ ಹಾಗೂ ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಅಥವಾ ಬೇರೆಲ್ಲಿಯೂ ಚಕಾರವೆತ್ತಲಿಲ್ಲ. ರಾಜ್ಯ ಸರ್ಕಾರ ಮಾಡಿದ ಉತ್ತಮ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿ ಈಗ ಸ್ವ ಪಕ್ಷೀಯರಿಂದಲೇ ಗೋಬ್ಯಾಕ್ ಚಳವಳಿಗೆ ತುತ್ತಾಗಿದ್ದಾರೆ. ಇಂತಹ ಸಂಸದೆಯನ್ನು ಬಿಜೆಪಿಯವರ ಚಳವಳಿಯಂತೆ ಮನೆಗೆ ಕಳುಹಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಸಚಿವೆ ಮೋಟಮ್ಮ, ಮಾಜಿ ಸಭಾಪತಿ ಬಿ.ಎಲ್.ಶಂಕರ್, ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ರಾಜ್ಯದ ನೇರಳೆಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ | ಮೊದಲ ಬಾರಿಗೆ ಲಂಡನ್‌ಗೆ ರಫ್ತು
June 25, 2025
11:39 AM
by: The Rural Mirror ಸುದ್ದಿಜಾಲ
ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡದಿಂದ ಅಧ್ಯಯನ
June 25, 2025
11:31 AM
by: The Rural Mirror ಸುದ್ದಿಜಾಲ
ಗ್ರಾಮೀಣ ಉದ್ಯಮಿಗಳ  ಸಬಲೀಕರಣ
June 25, 2025
11:26 AM
by: The Rural Mirror ಸುದ್ದಿಜಾಲ
ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ
June 25, 2025
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror