ದೆಹಲಿ: ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿದೆ. ಈ ಮೂಲಕ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಿದೆ.
ಈ ಬೇಡಿಕೆಯನ್ನು ಭಾರತ ಕಳೆದ ಕೆಲವು ಸಮಯಗಳಿಂದ ಮಂಡಿಸುತ್ತಾ ಬಂದಿತ್ತು. ಆದರೆ ಇದಕ್ಕೆ ಕೆಲವು ದೇಶಗಳು ವಿರೋಧ ವ್ಯಕ್ತಪಡಿಸುತ್ತಿದ್ದವು. ಭಾರತ ಹಾಗೂ ವಿಶ್ವದ ಇತರ ರಾಷ್ಟ್ರಗಳ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಇದೀಗ ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿದೆ. ಇದು ಭಾರತದ ರಾಜತಾಂತ್ರಿಕ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel