ಯಶಸ್ವಿಯಾಗಿ ಚೇತರಿಸಿಕೊಳ್ಳುತ್ತಿರುವ ಕುಕ್ಕೆ ಸುಬ್ರಹ್ಮಣ್ಯದ ಆನೆ “ಯಶಸ್ವಿ”

August 16, 2019
9:00 AM

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ಗುರುವಾರ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದೆ.

ನಾಗರಹೊಳೆ ಅಭಯಾರಣ್ಯದ ದುಬಾರೆ ವನ್ಯಸಂರಕ್ಷಣೆ ವಿಭಾಗದ ತಜ್ಞ ವೈದ್ಯ ಡಾ. ಶೆಟ್ಟಿಯಪ್ಪ ಆಗಮಿಸಿ ಶೆಡ್‍ನಲ್ಲಿರುವ ಆನೆಯ ಆರೋಗ್ಯ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ವೈದ್ಯ ಡಾ.ವೆಂಕಟಾಚಲಪತಿ ಸಹಕಾರದಲ್ಲಿ ಆನೆಗೆ ಚಿಕಿತ್ಸೆ ನೀಡಲಾಯಿತು. ಆನೆಯು ಅಜೀರ್ಣದಿಂದ ಬಳಲುತ್ತಿದ್ದು ತಿಂದ ಆಹಾರ ಜೀರ್ಣವಾಗುತಿಲ್ಲ. ದೇಹ ಉಷ್ಣತೆಯೂ ಅಧಿಕವಾಗಿದ್ದು ಆಹಾರ ಜೀರ್ಣವಾಗುತಿಲ್ಲ. ತಿಂದ ಆಹಾರ ಹೊಟ್ಟೆಯಲ್ಲಿ ಕರಗದೆ ಸೊಪ್ಪುವಿನ ನಾರು ಲದ್ದಿ ಜತೆ ಸುತ್ತಿಕೊಂಡು ಲದ್ದಿ ಹಾಕಲು ಸಾಧ್ಯವಾಗುತ್ತಿಲ್ಲ ಎಂದು  ಆನೆಯ ಆರೋಗ್ಯ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಈಗ  ಆಹಾರ ಜೀರ್ಣವಾಗಲು ಔಷಧಿ ನೀಡಲಾಗಿದೆ. ದೇಹದ ಉಷ್ಣಾಂಶ ಕಡಿಮೆಗೊಳಿಸಲು  ಎಳನೀರು ಗುರುವಾರ  ನೀಡಲಾಗಿದೆ. ದೇಹದಲ್ಲಿ ನೀರಿನಂಶ ಹೆಚ್ಚಿಸಲು ತುಸು ಬೆಚ್ಚಗಿನ ನೀರು ಕುಡಿಸಲಾಗುತ್ತಿದೆ. ಜತೆಗೆ ಮೃದು ಆಹಾರವನ್ನು ನೀಡಲಾಗುತ್ತಿದೆ. ಆನೆಯು ಸ್ವಲ್ಪವೇ ಚೇತರಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

ಆನೆಯ ಆರೋಗ್ಯ ಸುಧಾರಣೆಗೆ ಸಾಕಷ್ಟು ಕಾಳಜಿ ವಹಿಸಿ ಶ್ರಮ ವಹಿಸಲಾಗುತ್ತಿದೆ ಎಂದು ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಶೆಡ್‍ನಲ್ಲೆ ಇದ್ದು ಆನೆಗೆ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯ ಡಾ.ವೆಂಕಟಾಚಲಪತಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror