ಯೋಗದ ಮೂಲಕ ಕಾರ್ಗಿಲ್ ವಿಜಯ್‌ ದಿವಸ್‌ | ಸುಳ್ಯದ ಯೋಗೇನ ಚಿತ್ತಸ್ಯ ತಂಡದಿಂದ ವಿಶೇಷ ರೀತಿಯಲ್ಲಿ ಯೋಧರಿಗೆ ನಮನ |

July 26, 2020
2:30 PM

ಸುಳ್ಯ: ಕಾರ್ಗಿಲ್‌ ವಿಜಯ ದಿವಸ್.‌ ಈ ದಿನವನ್ನು ವಿವಿದೆಡೆ ವಿವಿಧ ಮಾದರಿಯಲ್ಲಿ  ಆಚರಿಸಲಾಗುತ್ತದೆ. ಸುಳ್ಯದ ಯೋಗೇನ ಚಿತ್ತಸ್ಯ ಯೋಗಾ ಯೋಗಾ ತಂಡದಿಂದ ಯೋಗಗುರು ಸಂತೋಷ್‌ ಮುಂಡಕಜೆ ನೇತೃತ್ವದಲ್ಲಿ  ವಿಶೇಷ ರೀತಿಯಲ್ಲಿ ಈ ದಿನವನ್ನು  ಆಚರಿಸಲಾಯಿತು. ಈ ತಂಡದ ಮಕ್ಕಳು ಒಂದು ಆಸನವನ್ನು  ಮಾಡುವ ಮೂಲಕ ಯೋಧರಿಗೆ ಸಮರ್ಪಿಸಿದರು. ಈ ಮೂಲಕ ಕಾರ್ಗಿಲ್‌ ದಿನವನ್ನು ಮಕ್ಕಳು ನೆನಪಿಸುವಂತೆ ಸುಳ್ಯದ ಯೋಗೇನ ಚಿತ್ತಸ್ಯ ಯೋಗಾ ಯೋಗಾ ತಂಡ ಮಾಡಿತು.

Advertisement

 

ಸುಳ್ಯದ ಯೋಗಗುರು ಸಂತೋಷ್‌ ಮುಂಡಕಜೆ ಅವರು ಯೋಗೇನ ಚಿತ್ತಸ್ಯ ಯೋಗಾ ಯೋಗಾ  ಎಂಬ ತಂಡದ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಸುಳ್ಯದಲ್ಲಿ  ಯೋಗ ತರಬೇತಿ ನೀಡುತ್ತಿದ್ದರು. ಲಾಕ್ಡೌನ್‌ ಕಾರಣದಿಂದ ಸುಳ್ಯದಲ್ಲಿ  ಯೋಗ ತರಬೇತಿ ನೀಡಲು ಸಾಧ್ಯವಾಗುತ್ತಿರಲಿಲ್ಲ. ಈ ಕಾರಣದಿಂದ ಆನ್‌ ಲೈನ್‌ ಮೂಲಕ ಮಕ್ಕಳಿಗೆ ಯೋಗ ಪಾಠ ಮಾಡುತ್ತಿದ್ದಾರೆ. ಸುಮಾರು 15 ರಿಂದ 20 ವಿದ್ಯಾರ್ಥಿಗಳು ಯೋಗ ತರಬೇತಿ ಪಡೆಯುತ್ತಿದ್ದಾರೆ. ಪ್ರತೀ ದಿನ ಕೂಡಾ ವಿನೂತನ ರೀತಿಯಲ್ಲಿ  ಯೋಗದ ತರಬೇತಿ ನೀಡುವ ಸಂತೋಷ್‌ ಮುಂಡಕಜೆ ಅವರು ಕಾರ್ಗಿಲ್‌ ವಿಜಯ ದಿವಸದಂದು ಮಕ್ಕಳಿಗೆ ಕಾರ್ಗಿಲ್‌ ದಿನದ ಬಗ್ಗೆ ತಿಳಿಯುವ ಉದ್ದೇಶದಿಂದ ಕಾರ್ಗಿಲ್‌ ಯೋಧರಿಗಾಗಿ ಒಂದು ಆಸನವನ್ನು  ಮಾಡಿ ವಿಡಿಯೋವನ್ನು  ಯೋಗೇನ ಚಿತ್ತಸ್ಯ ಯೋಗಾ ಯೋಗಾ ಎಂಬ ಪೇಸ್‌ ಬುಕ್‌ ಪೇಜ್‌ ಗೆ ಅಪ್ಲೋಡ್‌ ಮಾಡುತ್ತಿದ್ದಾರೆ. ಈ ಮೂಲಕ ಮಕ್ಕಳಲ್ಲೂ ಯೋಗದ ಜಾಗೃತಿ ಜೊತೆಗೆ ಕಾರ್ಗಿಲ್‌ ದಿನವನ್ನು  ನೆನಪಿಸಿದ್ದಾರೆ. ಈ ಹಿಂದೆಯೂ ಯೋಗ ಹಾಗೂ ರಾಷ್ಟ್ರದ ಬಗ್ಗೆ ಸಂತೋಷ್‌ ಮುಂಡಕಜೆ ನೇತೃತ್ವದಲ್ಲಿ ಜಾಗೃತಿ ಹಾಗೂ ಮಕ್ಕಳಿಗೆ ಪ್ರೋತ್ಸಾಹ ನೀಡುವ ಕಾರ್ಯ ನಡೆಸಿದ್ದರು.

ಯೋಗಾ ಯೋಗಾ ಪೇಸ್‌ ಬುಕ್‌ ಪೇಜ್‌

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್
July 20, 2025
7:24 AM
by: ದ ರೂರಲ್ ಮಿರರ್.ಕಾಂ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group