ರಂಗನಿರ್ದೇಶಕ ಜೀವನ್ ರಾಂ ರಿಗೆ ಬಣ್ಣದ ಮಾಲಿಂಗ ಸ್ಮೃತಿ ಪುರಸ್ಕಾರ

October 9, 2019
8:00 AM

ಸುಳ್ಯ: ಬಣ್ಣದ ಮಾಲಿಂಗ ಯಕ್ಷ ಪ್ರತಿಷ್ಠಾನ ಪುತ್ತೂರು ವತಿಯಿಂದ ‘ಬಣ್ಣದ ಮಾಲಿಂಗ ಸ್ಮೃತಿ ಪುರಸ್ಕಾರ’ವನ್ನು ರಂಗ ನಿರ್ದೇಶಕ ಜೀವನ್ ರಾಂ ಸುಳ್ಯರಿಗೆ ನೀಡಿ ಗೌರವಿಸಲಾಯಿತು.
ನೀರ್ಚಾಲಿನಲ್ಲಿ ನಡೆದ ಬಣ್ಣದ ಮಾಲಿಂಗ ಸಂಸ್ಕರಣ ಸಮಾರಂಭದಲ್ಲಿ ಈ ಪುರಸ್ಕಾರ ನೀಡಲಾಯಿತು.

ಯಕ್ಷ ರಂಗದಲ್ಲಿ 8 ದಶಕಗಳ ಕಾಲ ಮೆರೆದ ಬಣ್ಣದ ಮಾಲಿಂಗರ ಮಹಿರಾವಣ ವೇಷದ 15 ಅಡಿ ಎತ್ತರದ ಯಕ್ಷಪ್ರತಿಮೆಯನ್ನು ತನ್ನ ಮನೆಯಂಗಳದಲ್ಲಿ ಸ್ಥಾಪಿಸುವ ಮೂಲಕ ಅವರ ನೆನಪನ್ನು ಶಾಶ್ವತಗೊಳಿಸಿದ,ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರವನ್ನು ಸ್ಥಾಪಿಸಿದ, ಮಂಗಳೂರು ವಿ.ವಿ.ಹಾಗೂ ಮಂಜೇಶ್ವರ ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರದಲ್ಲಿ ಅಧ್ಯಯನಕ್ಕೆ ಪೂರಕವಾದ ಸುಸಜ್ಜಿತ ಯಕ್ಷಗಾನ ಮ್ಯೂಸಿಯಂಗಳನ್ನು ನಿರ್ಮಿಸಿದ ಜೀವನ್ ರಾಂ ರವರ ಯಕ್ಷ ಸೇವೆಯನ್ನು ಗುರುತಿಸಿ ಈ ಪುರಸ್ಕಾರವನ್ನು ನೀಡಲಾಗಿದೆ.

ವೇದಿಕೆಯಲ್ಲಿ ಹಿರಿಯ ವೇಷಧಾರಿ ಡಾ.ಕೋಳ್ಯೂರು ರಾಮಚಂದ್ರ ರಾವ್, ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಬಣ್ಣದ ಮಾಲಿಂಗ ಯಕ್ಷ ಪ್ರಶಸ್ತಿ ಪುರಸ್ಕೃತರಾದ ಬೊಮ್ಮಾರು ಐತಪ್ಪ ಗೌಡ, ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಮಾಸ್ತರ್ ಪಂಜತ್ತೊಟ್ ಟಿ,ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಎನ್.ಕೃಷ್ಣ ಭಟ್,ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಯತೀಶ್ ಕುಮಾರ್ ರೈ ಮುಳ್ಳೇರಿಯಾ,ಮಹಾಜನ ಸಂಸ್ಕೃತ ಕಾಲೇಜಿನ ಮೇನೇಜರ್ ಜಯದೇವ ಖಂಡಿಗೆ,ಸಂಘಟಕ ನಾರಾಯಣ ದೇಲಂಪಾಡಿ ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror