ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ಗೌರವಾರ್ಪಣೆ

June 14, 2019
10:30 AM

ಸವಣೂರು :52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರಿಗೆ ಜೂ.14ರಂದು ಮಂಗಳೂರಿನ ಟೌನ್ ಹಾಲ್‍ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ„ಕಾರಿ ಸಸಿಕಾಂತ್ ಸೆಂಥಿಲ್ , ಜಿ.ಪಂ.ಸಿಇಓ ಆರ್.ಸೆಲ್ವಮಣಿ ಸೇರಿದಂತೆ ಇತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಾರ್ಪಣೆ ನಡೆಯಲಿದೆ.

52 ಬಾರಿ ರಕ್ತದಾನ ಮಾಡಿರುವ ಹಾಗೂ ರಕ್ತದಾನದ ಮಹತ್ವ ಕುರಿತ ಪ್ರಚಾರ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಕೇಶ್ ರೈ ಕೆಡೆಂಜಿ ಅವರು ಸವಣೂರು ಯುವಕ ಮಂಡಲದ ಅಧ್ಯಕ್ಷರಾಗಿ ತಾಲೂಕು,ಜಿಲ್ಲೆ,ರಾಜ್ಯಮಟ್ಟದ ಯುವಜನ ಮೇಳಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು,ತಾಲೂಕು ,ಜಿಲ್ಲಾ ಯುವ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.ನರಿಮೊಗರು ಜೆಸಿಐ ಅಧ್ಯಕ್ಷರಾಗಿ ವ್ಯಕ್ತಿತ್ವ ವಿಕಸನ ದಂತಹ ಹಲವು ತರಬೇತಿಗಳನ್ನು ದ.ಕ.ಉಡುಪಿ,ಕೊಡಗು ಜಿಲ್ಲೆಗಳನ್ನೊಳಗೊಂಡ ವಲಯ 15ರಲ್ಲಿ ವಲಯ ತರಬೇತುದಾರರಾಗಿ ನಡೆಸಿದ್ದಾರೆ. ವಲಯಾ„ಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.ರಕ್ತದಾನದ ಜತೆಗೆ ನೇತ್ರದಾನ ಶಿಬಿರಗಳನ್ನು ಆಯೋಜಿಸಿ ಸುಮಾರು 60 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಲು ಕಾರಣೀಭೂತರಾಗಿದ್ದಾರೆ.ಅಲ್ಲದೆ ಸವಣೂರು ಗ್ರಾ.ಪಂ.ಸದಸ್ಯರಾಗಿ,ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.ಧಾರ್ಮಿಕ ,ರಾಜಕೀಯ ಕ್ಷೇತ್ರದಲ್ಲೂ ಸಕ್ರೀಯರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror