ರಾಜಕೀಯ ಒತ್ತಡದಿಂದ ತಹಶೀಲ್ದಾರ್ ವರ್ಗಾವಣೆ ?

December 28, 2019
4:59 PM

ಸುಳ್ಯ: ಸುಳ್ಯದಲ್ಲಿ ಪ್ರಾಮಾಣಿಕ ಮತ್ತು ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರ ವರ್ಗಾವಣೆ ಹಿಂದೆ ರಾಜಕೀಯ ಒತ್ತಡ ಕೆಲಸ ಮಾಡಿದೆಯೇ ಎಂಬ ಗುಮಾನಿ ಹಬ್ಬಿದೆ.

ಅಧಿಕಾರಿಗಳು ಕನಿಷ್ಟ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸುವುದು ಸಾಮಾನ್ಯವಾದರೂ ಕುಂಞಿ ಅಹಮ್ಮದ್ ಅವರನ್ನು ಒಂದು ವರ್ಷ ಆಗುವ ಮುನ್ನ ಎರಡು ಬಾರಿ ವರ್ಗಾವಣೆ ಮಾಡಿಸುವುದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿದೆ ಎಂಬ ಗುಸು ಗುಸು ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಹಲವಾರು ಸಮಸ್ಯೆಗಳಿಂದ ಬಳಲಿರುವ ಸುಳ್ಯದಲ್ಲಿ ಪದೇ ಪದೇ ತಹಶೀಲ್ದಾರ್ ಬದಲಿಸಿ ಅತಂತ್ರ ಪರಿಸ್ಥಿತಿ ನಿರ್ಮಾಣ ಮಾಡುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಹಶೀಲ್ದಾರ್ ವರ್ಗಾವಣೆಯ ಬಗ್ಗೆ ಹಲವು ವಿಧದ ಚರ್ಚೆಗಳು ಆರಂಭವಾಗಿದೆ.

ಕಳೆದ ಫೆಬ್ರುವರಿ ತಿಂಗಳಲ್ಲಿ ಸುಳ್ಯ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಕುಂಞಿ ಅಹಮ್ಮದ್ ರಿಗೆ ಕೇವಲ ಐದು ತಿಂಗಳಲ್ಲಿ ಕಳೆದ ಜುಲೈ ತಿಂಗಳಲ್ಲಿ ಇವರಿಗೆ ಒಮ್ಮೆ ವರ್ಗಾವಣೆ ಆದೇಶ ಬಂದಿತ್ತು. ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಸರಕಾರ ಬದಲಾದ ಕಾರಣ ಇವರ ವರ್ಗಾವಣೆ ಆದೇಶಕ್ಕೆ ತಡೆ ಬಿದ್ದಿತ್ತು. ಇದೀಗ 5 ತಿಂಗಳ ಬಳಿಕ ಮತ್ತೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಬಂದಿದೆ.

ರೈತ ಸಂಘ ಖಂಡನೆ: ತಹಶೀಲ್ದಾರ್ ವರ್ಗಾವಣೆಗೆ ಕರ್ನಾಟಕ ರೈತ ಸಂಘ ಖಂಡಿಸಿದೆ. ಜನರ ಪರವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ಸರಕಾರಕ್ಕೆ ಮನವಿ ಸಲ್ಲಿಸುವುದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ನಿಡಿಂಜಿ, ತೀರ್ಥರಾಮ ಉಳುವಾರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror