ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 19 | ಭಯ ಬೇಡ – ಇರಲಿ ಎಚ್ಚರ | ಕೋವಿಡ್-19  ಹರಡುವ ಮಾರ್ಗವನ್ನು ಬ್ರೇಕ್ ಮಾಡಿ

March 21, 2020
8:47 PM

ಮಂಗಳೂರು: ಕೋವಿಡ್-19  ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಶನಿವಾರ 4 ಹೊಸ ಪ್ರಕರಣ ಬೆಳಕಿಗೆ ಬರುವ ಮೂಲಕ ಒಟ್ಟು 19 ಮಂದಿ ಈಗ ಬಾಧಿತರಾಗಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣ ಹಾಗೂ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ   ದೃಢವಾಗಿರುವುದು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 19ಕ್ಕೇ ಏರಿದೆ. ದೇಶದಲ್ಲಿ ಒಟ್ಟು 271 ಕೋವಿಡ್-19  ಪ್ರಕರಣಗಳು ಪತ್ತೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಈವರೆಗೆ ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ ಪಟ್ಟಿಲ್ಲ.  89 ಜನರನ್ನು ಪರೀಕ್ಷಿಸಲಾಗಿದೆ, ಇದರಲ್ಲಿ 79 ಜನರಲ್ಲಿ  ಕೋವಿಡ್-19 ನೆಗೆಟಿವ್ ಇದ್ದರೆ  10 ಜನರ ವರದಿ ಕಾಯಲಾಗುತ್ತಿದೆ.  ಈಗ ಜನರು ಭಯಗೊಳ್ಳುವುದಕ್ಕಿಂತಲೂ ಜಾಗ್ರತೆ ವಹಿಸಬೇಕಿದೆ. ಮುಂಜಾಗ್ರತಾ ಕ್ರಮಗಳಿಂದ ಕೋವಿಡ್-19 ಮುಕ್ತ ಜಿಲ್ಲೆಯಾಗಿಸಬಹುದಾಗಿದೆ.

ಕೊರೋನ(ಕೋವಿಡ್-19) ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21 ರಿಂದ  ಮಾ.31ರ ಮಧ್ಯರಾತ್ರಿವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 6 ಕೊರೋನಾ ಪ್ರಕರಣಗಳು ವೈದ್ಯಕೀಯ ತಪಾಸಣೆಯಿಂದ ವರದಿಯಾದ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ – ಕೇರಳ ರಾಜ್ಯದ ಕಾಸರಗೋಡು ಗಡಿ ಭಾಗದಲ್ಲಿ ಸಂಚರಿಸುವ ಎಲ್ಲಾರೀತಿಯ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror