ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯು ಐತಿಹಾಸಿಕ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಈ ಗೆಲುವಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರ ರಾಜಕಾರಣದ ಭಾರಿ ನಾಯಕರೇ ಈ ಚುನಾವಣೆಯಲ್ಲಿ ಸೋತಿರುವುದು ರಾಜ್ಯದ ಜನರ ಮನದ ಇಂಗಿತವನ್ನು ಬಹಿರಂಗಗೊಳಿಸಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಲೋಕಸಭೆ ವಿಪಕ್ಷ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಏಳು ಬಾರಿ ಸಂಸದ ಕೆ.ಎಚ್.ಮುನಿಯಪ್ಪ ಸೇರಿದಂತೆ ಪ್ರಮುಖರು ಸೋಲು ಕಂಡಿದ್ದಾರೆ. ಹೀಗಾಗಿ ನೈತಿಕ ಹೊಣೆಹೊತ್ತು ಮೈತ್ರಿ ಸರಕಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಯಡಿಯೂರಪ್ಪ"