ರಾಜ್ಯಮಟ್ಟದ ಲಗೋರಿ – ಮಂಗಳೂರು ಚಾಂಪಿಯನ್

June 9, 2019
9:49 PM

ಸುಳ್ಯ :  ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಸುಳ್ಯದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಲಗೋರಿ ಪಂದ್ಯಾಟದಲ್ಲಿ ಮಂಗಳೂರಿನ ಹನುಮಾನ್ ಲಗೋರಿಯನ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

Advertisement
Advertisement
Advertisement

ಭಾನುವಾರ ಸಂಜೆ ನಡೆದ ಫೈನಲ್ ಪಂದ್ಯದಲ್ಲಿ ಮಂಗಳೂರಿನ ಹನುಮಾನ್ ಲಗೋರಿಯನ್ ತಂಡ ಕೊಡಗು ಜಿಲ್ಲೆಯ ಯುವ ಶಕ್ತಿ ಪೆರಾಜೆ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
12 ತಂಡಗಳು ಭಾಗವಹಿಸಿದ್ದ ಲಗೋರಿ ಲೀಗ್ ಪಂದ್ಯಾಟದಲ್ಲಿ `ಪೂಲ್ ಎ’ ಯಿಂದ ಯುವ ಶಕ್ತಿ ಪೆರಾಜೆ ಮತ್ತು ಹನುಮಾನ್ ಲಗೋರಿಯನ್ ಮಂಗಳೂರು ಹಾಗು `ಪೂಲ್ ಬಿ’ ಯಿಂದ ಪಂಚಶ್ರೀ ಪಂಜ ಮತ್ತು ಪ್ರಗತಿ ಫ್ರೆಂಡ್ಸ್ ಕಾಣಿಯೂರು ತಂಡಗಳು ಸೆಮಿಫೈನಲ್ ಪ್ರವೇಶಿಸಿತು. ಯುವ ಶಕ್ತಿ ಪೆರಾಜೆ ತಂಡ ಪ್ರಗತಿ ಫ್ರೆಂಡ್ಸ್ ತಂಡವನ್ನು ಮತ್ತು ಮಂಗಳೂರು ಹನುಮಾನ್ ಲಗೋರಿಯನ್ ತಂಡ ಪಂಚಶ್ರೀ ಪಂಜ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಪಂಚಶ್ರೀ ಪಂಜ ತೃತೀಯ ಸ್ಥಾನ ಮತ್ತು ಪ್ರಗತಿ ಫ್ರೆಂಡ್ಸ್ ಕಾಣಿಯೂರು ಚತುರ್ಥ ಸ್ಥಾನ ಪಡೆದುಕೊಂಡಿತು. ಬೆಸ್ಟ್ ಶೂಟರ್ ಆಗಿ ರಕ್ಷಿತ್ ಪೆರಾಜೆ, ಬೆಸ್ಟ್ ಫೀಲ್ಡರ್ ಆಗಿ ಅಜಿತ್ ಮಂಗಳೂರು, ಬೆಸ್ಟ್ ಆಲ್‍ರೌಂಡರ್ ಆಗಿ ಪುನಿತ್ ಮಂಗಳೂರು ಆಯ್ಕೆಯಾದರು.

Advertisement

ಸಮಾರೋಪ ಸಮಾರಂಭ:
ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಲಗೋರಿ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ
ಚನಿಯ ಕಲ್ತಡ್ಕ ವಿಜೇತರಿಗೆ ಬಹುಮಾನ ವಿತರಿಸಿದರು. ಲಗೋರಿ ಪಂದ್ಯಾಟ ಸಂಘಟನಾ ಸಮಿತಿಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ವರ್ತಕರ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುಸ್ತಫಾ ಅತಿಥಿಗಳಾಗಿದ್ದರು.

ಲಗೋರಿ ಸಂಘಟನಾ ಸಮಿತಿಯ ಸಂಯೋಜಕ ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಉಪಾಧ್ಯಕ್ಷ ಬಿ.ಕೆ.ಮಾಧವ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹಾಗು ಪಂದ್ಯಾಟದ ಪ್ರಧಾನ ಸಂಯೋಜಕ ದೊಡ್ಡಣ್ಣ ಬರೆಮೇಲು ವಂದಿಸಿದರು. ಶಶಿಧರ ಎಂ.ಜೆ. ಕಾರ್ಯಕ್ರಮ ನಿರೂಪಿಸಿದರು. ಲಗೋರಿ ನಿಯಮಗಳ ಕುರಿತು ಪುಸ್ತಕ ರಚಿಸಿದ ಮತ್ತು ಪಂದ್ಯಾಟದ ರುವಾರಿ ದೊಡ್ಡಣ್ಣ ಬರೆಮೇಲು ಅವರನ್ನು ಸನ್ಮಾನಿಸಲಾಯಿತು.

Advertisement

 

Advertisement

ರಾಜ್ಯ ಮಟ್ಟದ ಲಗೋರಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನಿಯಾದ ಮಂಗಳೂರು ಹನುಮಾನ್ ಲಗೋರಿಯನ್ ತಂಡ

 

Advertisement

 

Advertisement

ರಾಜ್ಯ ಮಟ್ಟದ ಲಗೋರಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಿಯಾದ ಯುವಶಕ್ತಿ ಪೆರಾಜೆ ತಂಡ

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror