ರೋಟರಿ ಸುವರ್ಣ ಮಹೋತ್ಸವ ಯೋಜನೆಗಳಿಗೆ ನ.11ರಂದು ಚಾಲನೆ

October 30, 2019
1:53 PM

ಸುಳ್ಯ:1971ರಲ್ಲಿ ಪ್ರಾರಂಭಗೊಂಡ ಸುಳ್ಯ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ 2020-21ನೇ ಸಾಲಿನಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು. ಸುವರ್ಣ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ವತಿಯಿಂದ 50 ಲಕ್ಷ ರೂ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

ನ.11ರಂದು ಈ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ರೋಟರಿ ಸುವರ್ಣ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಿತ್ತಡ್ಕ ರೋಟರಿ ಶಾಲಾ ವಠಾರದಲ್ಲಿ ಯೋಜನೆಗಳಿಗೆ ಚಾಲನೆ ಮತ್ತು ಭೂಮಿ ಪೂಜೆ ನಡೆಯಲಿದೆ. ರೋಟರಿ ಸದಸ್ಯರ ಸಹಕಾರದಲ್ಲಿ ಮಿತ್ತಡ್ಕ ರೋಟರಿ ಶಾಲೆಯಲ್ಲಿ ರಂಗಮಂದಿರ, ಸ್ವಾಗತ ಕಮಾನು, ಸುಳ್ಯ ರಥಬೀದಿಯ ರೋಟರಿ ಶಾಲೆಯಲ್ಲಿ ಹವಾನಿಯಂತ್ರಿತ ರೋಟರಿ ಸಭಾಭವನ, ಶಾಲೆಗೆ ಮೇಲ್ಮುಚ್ಚಿಗೆ, ಬಾಳುಗೋಡಿನ ಬೆಟ್ಟುಮಕ್ಕಿ ಎಂಬಲ್ಲಿ ರಂಗ ಮಂದಿರ, ಶೌಚಾಲಯ ನಿರ್ಮಾಣ ಮತ್ತಿತರ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ರೋಟರಿ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು ಯೋಜನೆಗೆ ಚಾಲನೆ ನೀಡುವರು. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಎಂ.ರಂಗನಾಥ ಭಟ್, ಝೋನ್ 5ರ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ, ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ.ಮೀನಾಕ್ಷಿ ಗೌಡ, ಪ್ರಭಾಕರನ್ ನಾಯರ್, ಗುರುರಾಜ ವೈಲಾಯ, ಲತಾ ಮಧುಸೂದನ್, ದಯಾನಂದ ಆಳ್ವ, ಗಣೇಶ್ ಶರ್ಮ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror