ಲಕ್ಷದೀಪೋತ್ಸವಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಜ್ಜಾಗುತ್ತಿದೆ : ಗುರ್ಜಿ ಪೂಜೆಗೆ ಸಿದ್ಧವಾಗುತ್ತಿದೆ ಕಾಶಿಕಟ್ಟೆ

November 25, 2019
6:39 PM

ಸುಬ್ರಹ್ಮಣ್ಯ:  ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.  ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ ಪೂಜೆಗೆ ಸಿದ್ಧತೆ ನಡೆಯುತ್ತಿದೆ.

ದೇವರ ಲಕ್ಷದೀಪೋತ್ಸವದ ಸಂದರ್ಭ ಭಕ್ತಾದಿಗಳ ಸಹಕಾರದಿಂದ  ಲಕ್ಷ ಹಣತೆಗಳನ್ನು ಹಚ್ಚಲಾಗುತ್ತದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ದೇವಳದ ಗೋಪುರದಿಂದ ಕಾಶಿಕಟ್ಟೆವರೆಗೆ ಲಕ್ಷ ಹಣತೆಗಳು ಬೆಳಗಲಿದೆ.ದೇವಳದ ಹೊರಾಂಗಣದಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ  ನಡೆಯಲಿದೆ.

ಗುರ್ಜಿ ಪೂಜೆ:
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ಶ್ರೀ ದೇವರಿಗೆ ಗುರ್ಜಿಯಲ್ಲಿ ಪೂಜೆ ನೆರವೇರುತ್ತದೆ. ಈ ಮೊದಲು ಕಾಶಿಕಟ್ಟೆ ಮಹಾಗಣಪತಿಗೆ ದೀಪಾರಾಧನೆಯುಕ್ತ ರಂಗಪೂಜೆ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror