ಲೇಖನಗಳ ಸತ್ಯಾಂಶವನ್ನು ವಿಮರ್ಶಿಸಿ – ನಾ. ಕಾರಂತ ಪೆರಾಜೆ

August 23, 2019
12:00 PM

ಪುತ್ತೂರು: ಉತ್ತಮ ಓದುಗಾರ ಒಳ್ಳೆಯ ಬರಹಗಾರನಾಗಬಹುದು ಎಂಬ ಮಾತಿನಂತೆ ಪತ್ರಕರ್ತ ಸಮಾಜದಲ್ಲಿ ಆಗುವ ವಿಚಾರಗಳನ್ನು ಲೇಖನದ ರೂಪದಲ್ಲಿ ಜನರಿಗೆ ತಲುಪಿಸಬೇಕು. ಆದರೆ ಆ ಲೇಖನದಲ್ಲಿ ತಪ್ಪು ಮಾಹಿತಿ ಇರದಂತೆ ಎಚ್ಚರವಹಿಸಬೇಕು. ಆದ್ದರಿಂದ ಸತ್ಯಾಂಶಗಳನ್ನು ವಿಮರ್ಶಿಸಿ ಲೇಖನ ಬರೆಯಬೇಕು ಎಂದು ಪುತ್ತೂರಿನ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಹೇಳಿದರು.
ಅವರು ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ‘ಬರವಣಿಗೆ ಏನು ಮತ್ತು ಹೇಗೆ‘ ಎಂಬ ವಿಷಯದ ಕುರಿತು  ಮಾತನಾಡಿದರು.
ಪ್ರತಿಯೊಂದು ಲೇಖನವು ಯಾಕಾಗಿ, ಯಾರಿಗಾಗಿ, ಏನನ್ನು ಮತ್ತು ಯಾವಾಗ ಎಂಬ ನಾಲ್ಕು ಅಡಿಗಟ್ಟಿನ ಮೇಲೆ ನಿಂತಿದೆ. ಹಾಗಾಗಿ ಈ ಪ್ರಶ್ನೆಗಳಿಗೆ ಉತ್ತರವನ್ನು ಹುಡಿಕಿ ಅದನ್ನು ಬರವಣಿಗೆ ಮೂಲಕ ರೂಪ ನೀಡುವುದೇ ಲೇಖನ ಎಂದು ತಿಳಿಸಿದರು.
ಸಮಯಪಾಲನೆಯೊಂದಿಗೆ ಸದಾ ವಿಷಯಗಳನ್ನು ಹುಡುಕುವ ಕಾರ್ಯದಲ್ಲಿ ನಿರತರಾಗಿರುವವರು ಪತ್ರಕರ್ತರು. ಹಾಗಾಗಿ ಆಯಾಯ ಋತುವಿಗೆ ಆಧಾರಿತ ಲೇಖನವನ್ನು ಬರೆಯಲು ಸಾಧ್ಯವಾಗುತ್ತದೆ. ಇದರಿಂದ ಆತನ ಬರವಣಿಗೆ ವೃದ್ಧಿಸುತ್ತದೆ ಎಂದು ಸಲಹೆ ನೀಡಿದರು.
ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್‍ಕುಮಾರ್ ಕಮ್ಮಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಭವ್ಯಾ ಪಿ.ಆರ್. ನಿಡ್ಪಳ್ಳಿ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror