ವಳಲಂಬೆಯಲ್ಲಿ ವಸಂತ ವೇದಶಿಬಿರ ಉದ್ಘಾಟನೆ

April 23, 2019
4:19 AM

ಗುತ್ತಿಗಾರು : ಅನೂಚಾನ ವೇದ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಸಹಯೋಗದೊಂದಿಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ ಶಿಬಿರ ಹಾಗೂ ಗಾಯತ್ರಿ ಯಜ್ಞ ಇತ್ತೀಚೆಗೆ ನಡೆಯಿತು.
ವೇದ ಶಿಬಿರವನ್ನು ಉದ್ಘಾಟಿಸಿದ ವಳಲಂಬೆ ಹಿರಿಯರಾದ ವೇ.ಮೂ. ಸುಬ್ರಾಯ ಕೆದಿಲಾಯ, ವೇದ ಶಿಬಿರದ ಅವಶ್ಯಕತೆಯ ಬಗ್ಗೆ ತಿಳಿಸಿ, ಮಕ್ಕಳಿಗೆ ಸಂಸ್ಕಾರ ಹಾಗೂ ಪುರಾಣ ಕತೆಗಳ ಬಗ್ಗೆ ತಿಳಿಸಬೇಕಾದ ಅವಶ್ಯಕತೆ ಇದೆ ಎಂದರು.
ಶಿಬಿರದ ಮುಖ್ಯ ಪ್ರಾಚಾರ್ಯ ವೇ.ಮೂ.ಮಹಾಬಲೇಶ್ವರ ಭಟ್ ಪ್ರಥಮ ಪಾಠವನ್ನು ಶಿಬಿರಾರ್ಥಿಗಳಿಗೆ ಭೋಧಿಸಿದರು.
ಗುತ್ತಿಗಾರು ಹವ್ಯಕ ವಲಯಾಧ್ಯಕ್ಷ ಸೀತಾರಾಮ ಭಟ್ ಸಭಾದ್ಯಕ್ಷತೆ ವಹಿಸಿದ್ದರು. ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಗುಂಡಿಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇ.ಮೂ.ಕರುವಜೆ ಕೇಶವ ಜೋಯಿಸರು ಗಾಯತ್ರೀ ಯಜ್ಞ ಸಂಕಲ್ಪ ಮತ್ತು ಘೃತ ಕಲಶ ಸ್ಥಾಪಿಸಿ ಗಾಯತ್ರೀ ಜಪಾರಂಭಿಸಿದರು.
ವಲಯ ಸಂಸ್ಕಾರ ವಿಭಾಗ ಪ್ರಮುಖ ಸುಬ್ರಹ್ಮಣ್ಯ ಭಟ್ ಜೀರ್ಮುಖಿ ಸ್ವಾಗತಿಸಿದರು. ವಲಯ ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ ವಂದಿಸಿದರು. ವಿದ್ಯಾಪ್ರತಿಷ್ಟಾನದ ಕಾರ್ಯದರ್ಶಿ ಶಿವರಾಮ ಕರುವಜೆ ನಿರ್ವಹಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ
March 14, 2025
6:57 AM
by: The Rural Mirror ಸುದ್ದಿಜಾಲ
ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ
March 14, 2025
6:54 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?
March 14, 2025
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror