ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗಳು ಸಾವು

June 11, 2019
9:31 PM
ಬಂಟ್ವಾಳ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಆಕಸ್ಮಿಕವಾಗಿ  ಸ್ಪರ್ಶಿಸಿ  ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ  ಘಟನೆ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಬಾರಕಿನಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಕೃಷಿಕ ಗೋಪಾಲಕೖಷ್ಣ  ಶೆಟ್ಟಿ (65) ಮತ್ತು ಅವರ ಪುತ್ರಿ ದಿವ್ಯಾ ಶೆಟ್ಟಿ (29) ಮೃತಪಟ್ಟವರು.
ಗೋಪಾಲಕೃಷ್ಣ ಅವರು ಚೆನ್ನೈತ್ಯೋಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ.
ಮಂಗಳವಾರ ಸಂಜೆ ತಂದೆ ಹಾಗೂ  ಮಗಳು  ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಳೆಯದಾದ ತಂತಿಗಳನ್ನು ಮೆಸ್ಕಾಂ  ಬದಲಿಸದೆ ಇರುವುದು ಈ ಘಟನೆಗೆ ಮೂಲ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನಾ ಸ್ಥಳಕ್ಕೆ ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ತಹಶೀಲ್ದಾರ್
ಸಹಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಉತ್ಪನ್ನಗಳ ಪರಿಣಾಮಗಳ ಕುರಿತು ಹೆಚ್ಚಿನ ಸಂಶೋಧನೆಗಳು ಅತ್ಯಗತ್ಯ
November 12, 2025
7:07 AM
by: ದ ರೂರಲ್ ಮಿರರ್.ಕಾಂ
ರಾಜ್ಯ ಸರ್ಕಾರದಿಂದ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ
November 12, 2025
6:30 AM
by: ರೂರಲ್‌ ಮಿರರ್ ಸುದ್ದಿಜಾಲ
ರೈತರಿಗೆ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ಸರ್ಕಾರ ನಿರ್ಧಾರ
November 9, 2025
11:43 AM
by: ದ ರೂರಲ್ ಮಿರರ್.ಕಾಂ
ದ್ರಾಕ್ಷಿ ಬೆಳೆಗಾರರಿಗೆ ನಷ್ಟ : ಇನ್ನು ಸಿಕ್ಕಿಲ್ಲ ಪರಿಹಾರ
November 9, 2025
11:05 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror