ವಿರಾಟ್ ವೀರಾವೇಶಕ್ಕೆ ವಿಂಡೀಸ್ ಧೂಳೀಪಟ

December 7, 2019
9:11 AM

ಹೈದರಾಬಾದ್: ಅಂತರಾಷ್ಟ್ರೀಯ ಟ್ವೆಂಟಿ–20 ಕ್ರಿಕೆಟ್‌ನಲ್ಲಿ ವೈಯಕ್ತಿಕ ಶ್ರೇಷ್ಠ ಸ್ಕೋರ್ ದಾಖಲಿಸಿದ ನಾಯಕ ವಿರಾಟ್ ಕೊಹ್ಲಿ (ಔಟಾಗದೆ 94) ಆಟದಿಂದ ಶುಕ್ರವಾರ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಮೊದಲ ಟ್ವೆಂಟಿ–20 ಪಂದ್ಯದಲ್ಲಿ ಭಾರತ ತಂಡವು 6 ವಿಕೆಟ್‌ಗಳಿಂದ ಗೆದ್ದಿತು.

Advertisement
Advertisement
Advertisement
Advertisement

ಆರಂಭಿಕ ಆಟಗಾರ, ಕೆ.ಎಲ್.ರಾಹುಲ್ (62 ರನ್) ಅರ್ಧಶತಕ ಬಾರಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು. ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ತಂಡವು 20 ಓವರ್‌ಗಳಲ್ಲಿ 5ಕ್ಕೆ 207 ರನ್ ಗಳಿಸಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತ ತಂಡವು 18.4 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 209 ರನ್‌ ಗಳಿಸಿ ಗೆದ್ದಿತು.

Advertisement

ಟಾಸ್ ಗೆದ್ದ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲರ್‌ಗಳಿಗೆ ವಿಂಡೀಸ್ ಬ್ಯಾಟ್ಸ್‌ಮನ್‌ಗಳು ಕಠಿಣ ಸವಾಲೊಡ್ಡಿದ್ದರು. ಎಡಗೈ ಸ್ಪಿನ್ನರ್ ಯಜುವೇಂದ್ರ ಚಾಹಲ್ ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿಯೇ ಲೆಂಡ್ಲ್ ಸಿಮನ್ಸ್‌ (2 ರನ್)ವಿಕೆಟ್ ಗಳಿಸಿದರು. ಆದರೆ, ಎವಿನ್ ಲೂಯಿಸ್ (40; 17ಎಸೆತ, 3ಬೌಂಡರಿ, 4 ಸಿಕ್ಸರ್) ಮತ್ತು ಬ್ರೆಂಡನ್ ಕಿಂಗ್ (31;23ಎ,3ಬೌಂ, 1ಸಿ) ಎರಡನೇ ವಿಕೆಟ್ ಜೊತೆಯಾಟದಲ್ಲಿ 51 ರನ್‌ ಗಳನ್ನು ಗಳಿಸಿದರು. ಆರು ಓವರ್‌ಗಳು ಮುಗಿಯುವಷ್ಟರಲ್ಲಿಯೇ ತಂಡದ ಸ್ಕೋರ್ 60ರ ಗಡಿ ದಾಟಿತ್ತು. ಆರನೇ ಓವರ್‌ನಲ್ಲಿ ಈ ಜೊತೆಯಾಟವನ್ನು ಮುರಿಯುವಲ್ಲಿ ವಾಷಿಂಗ್ಟನ್ ಸುಂದರ್ ಯಶಸ್ವಿಯಾದರು. ಬಳಿಕ ಕ್ರೀಸ್‌ಗೆ ಬಂದ ಹೆಟ್ಮೆಯರ್ (56; 41ಎ, 2ಬೌಂ, 4 ಸಿ) ಮೆರೆದರು. ಸ್ಪಿನ್ ಮತ್ತು ಸ್ವಿಂಗ್ ಎರಡನ್ನೂ ಲೀಲಾಜಾಲವಾಗಿ ಆಡಿದರು. ಇವರ ಬ್ಯಾಟಿಂಗ್‌ನಲ್ಲಿ ಫೀಲ್ಡರ್‌ಗಳಿಗೆ ಹೆಚ್ಚು ಕೆಲಸವೇ ಇರಲಿಲ್ಲ. ಕಿಂಗ್ ಔಟಾದ ನಂತರ ಹೆಟ್ಮೆಯರ್ ಜೊತೆಗೂಡಿದ ನಾಯಕ ಕೀರನ್ ಪೊಲಾರ್ಡ್‌ ಸಿಡಿಲಬ್ಬರದ ಆಟವಾಡಿದರು.

ಸಂಕ್ಷಿಪ್ತ ಸ್ಕೋರು: ವೆಸ್ಟ್ ಇಂಡೀಸ್: 20 ಓವರ್‌ಗಳಲ್ಲಿ 5ಕ್ಕೆ 207 (ಎವಿನ್ ಲೂಯಿಸ್ 40, ಬ್ರೆಂಡನ್ ಕಿಂಗ್ 31, ಶಿಮ್ರೊನ್ ಹೆಟ್ಮೆಯರ್ 56, ಕೀರನ್ ಪೊಲಾರ್ಡ್ 37, ಜೇಸನ್ ಹೋಲ್ಡರ್ ಔಟಾಗದೆ 24, ದಿನೇಶ್ ರಾಮ್ದಿನ್ ಔಟಾಗದೆ 11 , ಯಜುವೇಂದ್ರ ಚಾಹಲ್ 36ಕ್ಕೆ2)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror