ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

February 28, 2020
1:57 PM

ಪುತ್ತೂರು: ಭಾರತದ ಆತ್ಮವೇ ಆಧ್ಯಾತ್ಮಿಕತೆ, ನಂಬಿಕೆ. ಅದನ್ನು ಕಂಡುಕೊಳ್ಳುವ ಪ್ರಯತ್ನವನ್ನು ಇಂದಿನ ಯುವಜನತೆ ಮಾಡಬೇಕು. ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಕೂಡ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಇಂದು ಮಹಾಪುರುಷರ ಆದರ್ಶಗಳು, ತತ್ವಗಳು ಕೇವಲ ಭಾವಚಿತ್ರಗಳಿಗೆ ಮಾತ್ರ ಸೀಮಿತವಾಗಿದೆ. ಸಾಮಾಜಿಕ ಜಾಲತಾಣಗಳು ಇಂದಿನ ಯುವಸಮೂಹದ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಹೀಗಾಗಿ ಇವುಗಳಿಂದ ಮುಕ್ತಿ ಹೊಂದಿ ಉತ್ತಮ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರಿನ ಮೈತ್ರೇಯ ಗುರುಕುಲದ ಬೌದ್ಧಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ವಿಭಾಗದ ಮುಖ್ಯಸ್ಥ ದುರ್ಗಾಪರಮೇಶ್ವರ ಅಭಿಪ್ರಾಯಪಟ್ಟರು.

ಅವರು ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ವಿಭಾಗದ ಆಶ್ರಯದಲ್ಲಿ ಐಕ್ಯುಎಸಿ ಘಟಕ ಮತ್ತು ವಾಣಿಜ್ಯ ಮತ್ತು ನಿರ್ವಹಣ ಸಂಘದ ಸಹಯೋಗದಲ್ಲಿ ಗುರುವಾರ ನಡೆದ ‘ಪ್ಯಾಟ್ರಿಯೋಟಿಸಂ ಇನ್ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನಿಬಲಿಟಿ’ ಎಂಬ ವಿಷಯದ ಕುರಿತ ಉಪನ್ಯಾಸಕ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತಾಡಿದರು. ಇಂದಿನ ಯುವ ಸಮುದಾಯ ತಮ್ಮ ಉನ್ನತಿಗೆ ಏನು ಮಾಡಬೇಕು ಅದನ್ನು ತಿಳಿಯದೆ ಕೇವಲ ಹೊರಪ್ರಪಂಚದ ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಇದು ಮಾತ್ರ ಶೋಚನೀಯ. ಉತ್ತಮರ ಸಂಘ ಮಾಡಿದಾಗ ಉತ್ತಮ ವಿಚಾರಗಳು ಹೊರ ಹೊಮ್ಮುತ್ತವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಸಾಮಾಜಿಕ ಜವಾಬ್ದಾರಿ ಇರಬೇಕು. ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಬೇಕು. ಇಂದಿನ ಯುವಜನತೆಯಲ್ಲಿ ಒಂದು ವಿಷಯದ ಬಗ್ಗೆ ಮಾಹಿತಿ ತುಂಬಾ ಇದೆ. ಆದರೆ ಅವರಲ್ಲಿ ಅದರ ಜ್ಞಾನದ ಕೊರತೆ ಇದೆ. ಇಂದು ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಾಮಾಜಿಕ ಜವಾಬ್ದಾರಿ ಏನೆಂಬುದನ್ನು ಮೊದಲು ಅರಿಯಬೇಕು ಎಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ, ವಾಣಿಜ್ಯ ಮತ್ತು ನಿರ್ವಹಣ ಸಂಘದ ಅಧ್ಯಕ್ಷ ಅಂಕಿತ್ ಕೆ.ಸಿ., ಕಾರ್ಯದರ್ಶಿ ಶಾಂತನ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭಾಗ್ಯಶ್ರೀ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ರದ್ಧಾ ವಂದಿಸಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror