ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

August 25, 2020
9:15 PM

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಇಂಜಿನಿಯರಿಂಗ್ ನಲ್ಲಿ 9ನೇ ರ್ಯಾಂಕ್ ಮತ್ತು ಫಾರ್ಮಾದಲ್ಲಿ 10 ನೇ ರ್ಯಾಂಕ್ ಗಳಿಸಿದ ಗೌರೀಶ್‍ ಕಜಂಪಾಡಿ, ಇಂಜಿನಿಯರಿಂಗ್ ನಲ್ಲಿ 1226ನೇ ರ್ಯಾಂಕ್ ಗಳಿಸಿದ ನಿಶಾ ಎಂ.ಎಸ್, ಇಂಜಿನಿಯರಿಂಗ್ ನಲ್ಲಿ 1356ನೇ ರ್ಯಾಂಕ್ ಗಳಿಸಿದ ಸಾಕ್ಷಾತ್‍ ಎಸ್ ಎಂ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 39 ನೇ ರ್ಯಾಂಕ್, ವೆಟರ್ನರಿಯಲ್ಲಿ 127ನೇ ರ್ಯಾಂಕ್, ಫಾರ್ಮಾದಲ್ಲಿ 217ನೇ ರ್ಯಾಂಕ್, ನ್ಯಾಚುರೋಪತಿ ವಿಭಾಗದಲ್ಲಿ 63ನೇ ರ್ಯಾಂಕ್ ಮತ್ತುಇಂಜಿನಿಯರಿಂಗ್ ನಲ್ಲಿ 364ನೇ ರ್ಯಾಂಕ್ ಗಳಿಸಿದ ಅಕ್ಷಯ್ ಪಾಂಗಾಳ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1033 ನೇ ರ್ಯಾಂಕ್ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ 1220ನೇ ರ್ಯಾಂಕ್ ಗಳಿಸಿದ ಶಮಾ ಕೆ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 895 ನೇ ರ್ಯಾಂಕ್ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ 1454ನೇ ರ್ಯಾಂಕ್ ಗಳಿಸಿದ ಬಿ. ಎನ್. ಈಶ್ವರ ಪ್ರಸನ್ನ, ನ್ಯಾಚುರೋಪತಿ ವಿಭಾಗದಲ್ಲಿ 1082ನೇ ರ್ಯಾಂಕ್ ಗಳಿಸಿದ ವಿಜಿತ್ ಕೃಷ್ಣ ಇವರನ್ನು ಶಾಲು ಹೊದಿಸಿ, ಪುಸ್ತಕ ಮತ್ತು ಸಿಹಿ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಅಡಳಿತ ಮಂಡಳಿಯ ಸಂಚಾಲಕ ಸಂತೋಷ್ ಬಿ, ಸದಸ್ಯರಾದ ಕೇಶವ ಮೂರ್ತಿ, ಸಚಿನ್ ಶೆಣೈ, ವತ್ಸಲಾರಾಜ್ಞಿ, ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಉಪನ್ಯಾಸಕರು, ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ
ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror