ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋ ಲೋಕಾರ್ಪಣೆ

May 7, 2019
2:22 PM

ಪುತ್ತೂರು: ಮಾಧ್ಯಮಗಳು  ರಾಷ್ಟ್ರೀಯತೆ ಪಂಥವನ್ನೇ ಆದರ್ಶವಾಗಿರಿಸಿ ಕಾರ್ಯತತ್ಪರರಾಗಬೇಕು. ದೇಶದ ಉನ್ನತಿಗೆ ಪೂರಕವಾಗುವ ತೆರನಾದ ಪತ್ರಿಕೋದ್ಯಮ ಅಗತ್ಯವಿವೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಅವರು ಮಂಗಳವಾರ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಕ್ಕಾಗಿ ರೂಪಿಸಲಾದ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ಉದ್ಘಾಟನೆಯನ್ನು ನೆರವೇರಿಸಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಂದರ್ಶನ ನೀಡಿ ಮಾತನಾಡಿದರು.

ದೇಶ ವಿರೋಧಿ ಚಿಂತನೆಗೆ ಬೆಂಬಲವನ್ನು ನೀಡುವ ಕಾರ್ಯಗಳನ್ನು ಮಾಧ್ಯಮಗಳು ಮಾಡಬಾರದು. ಇದರ ಬದಲು ರಾಷ್ಟ್ರೀಯ ಚಿಂತನೆಗಳನ್ನು ಪ್ರೇರೇಪಿಸುವ ಕಾರ್ಯ ಮಾಧ್ಯಮದಿಂದಾಗಬೇಕು. ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ಮೂಲಕ ಅತ್ಯುತ್ಕೃಷ್ಟ ಮುಂದಿನ ಪತ್ರಕರ್ತರನ್ನು ತಯಾರಿಸುವ ಉದ್ದೇಶವನ್ನು ಹೊಂದಿದ್ದೇವೆ. ಪತ್ರಿಕೋದ್ಯಮ ಸಂಬಂಧಿ ಚಟುವಟಿಕೆಗಳಿಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿಕೊಡಲು ವಿವೇಕಾನಂದ ವಿದ್ಯಾವರ್ಧಕ ಸಂಘ ಸಿದ್ಧವಾಗಿದೆ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ, ಸಂಚಾಲಕ ಎಂ.ಟಿ.ಜಯರಾಮ ಭಟ್, ಕೋಶಾಧಿಕಾರಿ ಸೇಡಿಯಾಪು ಜನಾರ್ಧನ ಭಟ್, ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ವಿಶ್ರಾಂತ ಪ್ರಾಂಶುಪಾಲ ಡಾ. ಎಚ್.ಮಾಧವ ಭಟ್, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್, ಕ್ಯಾಂಪಸ್ ಮ್ಯಾನೇಜರ್ ಲಕ್ಷ್ಮೀಪ್ರಸಾದ್, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ರಾಕೇಶ್ ಕುಮಾರ್ ಕಮ್ಮಜೆ, ಭವ್ಯಾ ಪಿ.ಆರ್., ಸುಶ್ಮಿತಾ ಜೆ., ರಾಧಿಕ ಕಾನತ್ತಡ್ಕ, ಪ್ರಜ್ಞಾ ಬಾರ್ಯ, ಗಣೇಶ್ ಪ್ರಸಾದ್, ಭರತ್‍ರಾಜ್, ಸ್ಟುಡಿಯೋ ನಿರ್ವಾಹಕ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror