ವೀರಸಾವರ್ಕರ್ ಬಗ್ಗೆ ಅವಹೇಳನ : ಕ್ರಮಕ್ಕೆ ಆಗ್ರಹ

January 15, 2020
7:23 AM

ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?)  ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ ಹಾಗೂ ಕಟ್ಟುಕತೆ ಬರೆದು ಅವಹೇಳನ ಮಾಡಲಾಗಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಕಮೀಶನರ್ ಮೂಲಕ ಸರ್ಕಾರವನ್ನು  ಒತ್ತಾಯಿಸಲಾಯಿತು.

Advertisement

ಕಾಂಗ್ರೆಸ್‌ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರಕರರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಆವಶ್ಯಕತೆ ಇದೆ. ಕಾಂಗ್ರೆಸ್‌  ವಿತರಿಸಿದ ಪುಸ್ತಕದಿಂದ ದೇಶದಲ್ಲಿ ಕೋಮು ಹಾಗೂ ಜಾತಿಯ ಒತ್ತಡವನ್ನು ನಿರ್ಮಿಸಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಸಂಚಿರುವುದು ಗಮನಕ್ಕೆ ಬರುತ್ತದೆ.  ಇದು ಸಂಪೂರ್ಣ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದ್ದು ಈ ಆಕ್ಷೇಪಾರ್ಹ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಸಹಾಯಕ ಕಮೀಷನರ್ ಗಳಿಗೆ ಮತ್ತು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror