ವೃದ್ಧನ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ : ರಾಜ್ಯ ಮಾನವಹಕ್ಕು ಆಯೋಗಕ್ಕೆ ದೂರು

April 25, 2019
4:20 AM

ಕಡಬ: ಕೊಂಬಾರು ನಿವಾಸಿ, ವೃದ್ಧ ರಾಮಣ್ಣ ಗೌಡರ ಮೇಲೆ ಕಡಬ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಲಾಠಿಯಿಂದ ಹಲ್ಲೆ ನಡೆಸಿರುವ ಆರೋಪಿ ಪೊಲೀಸ್ ಸಿಬಂದಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟಗಾರ ಉಪ್ಪಿನಂಗಡಿಯ ಪ್ರಶಾಂತ್ ಡಿ’ ಕೋಸ್ತ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯವಾಗಿ ಪೊಲೀಸರು ಯಾರ ಮೇಲೆಯೂ ದೈಹಿಕ ಹಲ್ಲೆ ನಡೆಸುವಂತಿಲ್ಲ. ಆದರೆ ಈ ಪ್ರಕರಣದಲ್ಲಿ ಮಾನಸಿಕವಾಗಿ ನೊಂದಿರುವ ವಯೋವೃದ್ಧ ರಾಮಣ್ಣ ಗೌಡರ ಮೇಲೆ ಜಾತ್ರೆಯ ವೇಳೆ ಸಾರ್ವಜನಿಕರು ಓಡಾಡುತ್ತಿರುವ ರಸ್ತೆಯಲ್ಲಿ ಆರೋಪಿ ಪೊಲೀಸ್ ಸಿಬಂದಿ ಪಂಪಾಪತಿ ಲಾಠಿಯಲ್ಲಿ ಹೊಡೆದು ತೀವ್ರ ತರದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ಹಲ್ಲೆಗೊಳಗಾಗಿ ಕುಸಿದು ಬಿದ್ದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸದೆ ರಸ್ತೆಯಲ್ಲಿಯೇ ಬಿಟ್ಟು ಹೋಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ. ಶಾಂತಿ ಕಾಪಾಡಬೇಕಾಗಿದ್ದ ಪೊಲೀಸರೇ ಈ ರೀತಿ ವರ್ತಿಸಿರುವುದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಆದುದರಿಂದ ಪ್ರಕರಣದ ಆರೋಪಿ ಪೊಲೀಸ್ ಸಿಬ್ಬಂದಿ ಪಂಪಾಪತಿಯನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಡಾ|ರವೀಂದ್ರನಾಥ ಶಾನುಭಾಗ್ ನೇತೃತ್ವದ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ವೇದಿಕೆಗೂ ಪ್ರಕರಣ ಬಗ್ಗೆ ದೂರು ನೀಡಲಾಗಿದೆ ಎಂದು ಪ್ರಶಾಂತ್ ಡಿ’ ಕೋಸ್ತ ಅವರು ತಿಳಿಸಿದ್ದಾರೆ.

Advertisement

 

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ
ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror