ವೆಂಕಟರಮಣ ಸೊಸೈಟಿಯ 11 ನೇ ಶಾಖೆ ಕುಶಾಲನಗರದಲ್ಲಿ

June 4, 2019
9:24 PM

ಸುಳ್ಯ: ಸುಳ್ಯದಲ್ಲಿ ಪ್ರಧಾನ ಶಾಖೆಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಶಾಖೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕಾರ್ಯಾರಂಭಗೊಳ್ಳಲಿದೆ.

ಗೌಡರ ಯುವ ಸೇವಾ ಸಂಘ ಪ್ರವರ್ತಿತ ಸಂಸ್ಥೆಯ ನೂತನ ಶಾಖೆಯು ಜೂ.9 ರಂದು ಕುಶಾಲನಗರ ಬಿ.ಎಂ.ರೋಡ್ ನಲ್ಲಿಯ ಬೈಚನಹಳ್ಳಿ ಆತ್ಮೀಯ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸುವರು. ವೆಂಕಟರಮಣ ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸುವರು. ಗಣಕೀಕರಣವನ್ನು ಮಡಿಕೇರಿ ಶಾಸಕ ಅಪ್ಪಚ್ಚುರಂಜನ್, ಭದ್ರತಾಕೊಠಡಿಯನ್ನು ಮಾಜಿ ಸಚಿವ ಬಿ.ಎ.ಜೀವಿಜಯ ಉದ್ಘಾಟಿಸುವರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೇಚಪ್ಪನ ಮೋಹನಕುಮಾರ್, ಪ್ರಥಮ ಪಾಲುಪತ್ರ ವಿತರಣೆಯನ್ನು ಪೊಲೀಸ್ ಉಪ ಅಧೀಕ್ಷಕ ಮುರಳೀಧರ ಪಿ.ಕೆ, ಪ್ರಥಮ ಸಾಲಪತ್ರ ವಿತರಣೆಯನ್ನು ಪಟ್ಟಣ ಪಂಚಾಯತ್ ಸದಸ್ಯೆ ರೇಣುಕಾ ಜಗದೀಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ಲಾಂಟರ್ ದಂಬೆಕೋಡಿ ಲವಕುಮಾರ್, ವಕೀಲರಾದ ತೆಕ್ಕೆಡೆ ನೇಮಿರಾಜ್, ಆತ್ಮೀಯ ಕಾಂಪ್ಲೆಕ್ಸ್ ಮಾಲಕಿ ಡಿ.ಎಚ್.ರುಕ್ಮಿಣಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಉಪಾಧ್ಯಕ್ಷ ಪಿ.ಎಸ್.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!
March 18, 2026
1:40 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror