ಶಾಸಕ ಅಂಗಾರ ಅವರಿಂದ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ

May 17, 2019
2:36 PM

ಮಾಡಾವು :  ಮಾಡಾವು 110 ಕೆವಿ ವಿದ್ಯುತ್ ಸಬ್‍ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು ಸುಳ್ಯ ಶಾಸಕ ಎಸ್ ಅಂಗಾರ  ಶುಕ್ರವಾರ ಭೇಟಿ ನೀಡಿ ಕೆಪಿಟಿಸಿಎಲ್ ಅಧಿಕಾರಿಗಳಿಂದ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.

ಕೆಪಿಟಿಸಿಎಲ್ ಸುಪರಿಟೆಂಡಿಂಗ್ ಎಂಜಿನಿಯರ್ ರವಿಕಾಂತ್ ಕಾಮತ್ ಕಾಮಗಾರಿ ಕುರಿತಂತೆ ಮಾಹಿತಿ ನೀಡಿ ಆಗಸ್ಟ್ ವೇಳೆಗೆ  ಸಬ್‍ಸ್ಟೇಶನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ನೆಟ್ಲಮುಡ್ನೂರಿನಿಂದ ಕಬಕ ಮೂಲಕ ಮಾಡಾವಿಗೆ 110 ಕೆ ವಿ ವಿದ್ಯುತ್ ಸರಬರಾಜು ಮಾಡುವ ಯೋಜನೆ ಇದಾಗಿದ್ದು ಬೊಳಿಕಳದಲ್ಲಿ ಸುಮಾರು 4 ಎಕರೆ ಪ್ರದೇಶದಲ್ಲಿ ಸಬ್‍ಸ್ಟೇಷನ್ ನಿರ್ಮಾಣದ ಕಾಮಗಾರಿ  ಪ್ರಗತಿಯಲ್ಲಿದೆ.

ಶಾಸಕರು ಬೆಂಗಳೂರಿನಲ್ಲಿ ಕೆ.ಪಿ.ಟಿ.ಸಿ.ಎಲ್.  ಎಂ ಡಿ ಅವರನ್ನು ಕಳೆದ ವಾರ ಭೇಟಿಯಾಗಿದ್ದರು. ಕಾಮಗಾರಿಯನ್ನು ಶೀಘ್ರ ಪೂರೈಸಲು ಅಗತ್ಯವುಳ್ಳ ಎಲ್ಲಾ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಬ್ ಸ್ಟೇಷನ್ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮಳೆಗಾಲ ಆರಂಭಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಗಿದು, ಇದೇ ಆಗಸ್ಟ್ ವೇಳೆಗೆ ಬಿಟ್ಟುಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಲೈನ್ ಕೆಲಸದ ಬಗ್ಗೆ ಇರುವ ಅಡೆತಡೆ ನಿವಾರಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಅಂಗಾರ ತಿಳಿಸಿದರು.

ಕಾಮಗಾರಿ ಕುರಿತಂತೆ ಕೆಪಿಟಿಸಿಎಲ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಗಂಗಾಧರ,ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸತೀಶ್ , ಅಸಿಸ್ಟೆಂಟ್ ಎಂಜಿನಿಯರ್ ಬಸವರಾಜು,ಪ್ರಾಜೆಕ್ಟ್ ಎಂಜಿನಿಯರ್ ವಿಜೆಂದ್ರ ಮಾಹಿತಿ ನೀಡಿದರು.

Advertisement

ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುಳ್ಯ ಕಿಸಾನ್ ಸಂಘದ ಪ್ರಮುಖರಾದ ಪಿಜಿಎಸ್‍ಎನ್ ಪ್ರಸಾದ್ ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಬಾಳಿಲ ಗ್ರಾ.ಪಂ.ಸದಸ್ಯ ಯು.ರಾಧಾಕೃಷ್ಣ ರಾವ್,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಮೊದಲಾದವರಿದ್ದರು.

 

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಟ್ವಾಳ : ನಾವೂರು ಪೋಯಿಲೊಡಿಯಲ್ಲಿ ಏಣಿಗಳ ವಿತರಣೆ
November 16, 2025
10:18 AM
by: ದ ರೂರಲ್ ಮಿರರ್.ಕಾಂ
ಸುಳ್ಯ, ಅಜ್ಜಾವರ : ಕೃಷಿ ಸಖಿಯರ ಮೂಲಕ ರೈತರಿಗೆ ಏಣಿಗಳ ವಿತರಣೆ
November 16, 2025
10:16 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಉತ್ಪನ್ನಗಳ ಪರಿಣಾಮಗಳ ಕುರಿತು ಹೆಚ್ಚಿನ ಸಂಶೋಧನೆಗಳು ಅತ್ಯಗತ್ಯ
November 12, 2025
7:07 AM
by: ದ ರೂರಲ್ ಮಿರರ್.ಕಾಂ
ರಾಜ್ಯ ಸರ್ಕಾರದಿಂದ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ
November 12, 2025
6:30 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror