ಶಿಥಿಲಗೊಂಡು ಕುಸಿಯುವ ಭೀತಿಯಲ್ಲಿ ಪ್ರಯಾಣಿಕರ ತಂಗುದಾಣ

May 15, 2019
1:00 PM

ಕಡಬ: ತಾಲೂಕು ಕೇಂದ್ರ ಕಡಬ ಪೇಟೆಯಲ್ಲಿರುವ ಪಂಚಾಯತ್  2 ಪ್ರಯಾಣಿಕರ ತಂಗುದಾಣದ ಪೈಕಿ ದೈವಗಳ ಮಾಡದ ಬಳಿ ಇರುವ ತಂಗುದಾಣ ಸಂಪೂರ್ಣವಾಗಿ ಶಿಥಿಲಗೊಂಡು ಯಾವುದೇ ಕ್ಷಣದಲ್ಲಿ ಕುಸಿದುಬೀಳುವ ಹಂತದಲ್ಲಿದೆ.

Advertisement
Advertisement

ಕಡಬ ತಾಲೂಕು ಕೇಂದ್ರವಾಗಿದ್ದರೂ ಇಲ್ಲಿ ಸುಸಜ್ಜಿತ ಬಸ್ ತಂಗುದಾಣವಿಲ್ಲ. ಕೆಎಸ್ಸಾರ್ಟಿಸಿ ವತಿಯಿಂದ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಪ್ರಾಥಮಿಕ ಪ್ರಕ್ರಿಯೆಗಳು ನಡೆದಿದೆಯಾದರೂ ಜಮೀನಿನ ಸಮಸ್ಯೆಯಿಂದಾಗಿ ಅದೂ ಕೂಡ ಸದ್ಯಕ್ಕೆ ಕಾರ್ಯರೂಪಕ್ಕೆ ಬರುವುದು ಸಂಶಯ. ಇದೀಗ ಇರುವ ಪ್ರಯಾಣಿಕರ ತಂಗುದಾಣವೂ ಕುಸಿದುಬೀಳುವ ಹಂತದಲ್ಲಿದೆ. ತಂಗುದಾಣದ ಛಾವಣಿಯ ಮರದ ಪಕ್ಕಾಸು ಹಾಗೂ ರೀಪುಗಳು ಶಿಥಿಲಗೊಂಡು ಮುರಿದುಹೋಗಿವೆ. ಅಲ್ಲಲ್ಲಿ ಹೆಂಚುಗಳು ಕೂಡ ಕೆಳಕ್ಕೆ ಬಿದ್ದು ಆಕಾಶ ಕಾಣಿಸುತ್ತಿದೆ. ಪ್ರಸ್ತುತ ಸಾರ್ವಜನಿಕರು ಇದೇ ತಂಗುದಾಣವನ್ನು ಬಳಸುತ್ತಿರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚಿವೆ. ಆದುದರಿಂದ ಕೂಡಲೇ ಪಂಚಾಯತ್ ಆಡಳಿತ ಈ ಕುರಿತು ಗಮನಹರಿಸಬೇಕಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

Advertisement
Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ | ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ |
December 8, 2023
2:41 PM
by: ದ ರೂರಲ್ ಮಿರರ್.ಕಾಂ
ಕೃಷಿ ಆಶ್ರಮ ಎಂದರೇನು? ಅದರ ಸ್ಥಾಪನೆಗೆ ಸಿದ್ಧತೆ ಹೇಗೆ? ತೆರೆಯಲು ಎಷ್ಟು ವೆಚ್ಚ ಬಂದೀತು ?
December 8, 2023
2:36 PM
by: The Rural Mirror ಸುದ್ದಿಜಾಲ
ನಮ್ಮ ನಮ್ಮಲ್ಲಿ ಹೊಂದಾಣಿಕೆ ಇರಲಿ | ನಾವು ಶಾಂತಿಯಿಂದ ಇರಬೇಕಾದರೆ ನಮ್ಮ ಸುತ್ತಮುತ್ತ ಶಾಂತಿ ಇರಬೇಕು |
December 8, 2023
2:24 PM
by: The Rural Mirror ಸುದ್ದಿಜಾಲ
5 ದೇಶಗಳಿಗೆ ಅಕ್ಕಿ ರಫ್ತು ಮಾಡಲು ಸರ್ಕಾರದ ಅನುಮತಿ
December 8, 2023
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror