ಶಿಬಿರದ ಮರುದಿನವೇ ಕೆಲಸದಲ್ಲಿ ತೊಡಗಿದ ಯುವಕ

May 11, 2019
3:20 PM

ಸುಳ್ಯ: ಅಡಿಕೆ  ಮರ ಏರುವ ತರಬೇತಿ ಶಿಬಿರದ ಮರುದಿನವೇ ಯುವಕನೊಬ್ಬ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ. ಇದು ಪಂಜದಲ್ಲಿ ನಡೆದ ಅಡಿಕೆ ಮರ ಏರುವ ಶಿಬಿರದ ನಂತರದ ಮೊದಲ ಸುದ್ದಿ.

ಸಹಕಾರಿ ಸಂಘಗಳು ಮುಂಚೂಣಿಯಲ್ಲಿ  ನಿಂತು ಅಡಿಕೆ ಬೆಳೆಗಾರರ ರಕ್ಷಣೆಯ ಕಡೆಗೆ ಹೆಜ್ಜೆ ಇಟ್ಟಿವೆ. ಅಡಿಕೆ ಮರ ಏರುವ ತರಬೇತಿ ಮೂಲಕ ಸ್ವ ಉದ್ಯೋಗ, ಕೃಷಿ ರಕ್ಷಣೆಯ ಕಡೆಗೆ ಮನಸ್ಸು ಮಾಡಿದ್ದಾರೆ.  ಕಳೆದ ಡಿಸೆಂಬರ್ ತಿಂಗಳಲ್ಲಿ  ಕ್ಯಾಂಪ್ಕೋ ನೇತೃತ್ವದಲ್ಲಿ ವಿಟ್ಲ ಸಿಪಿಸಿಆರ್ ಐ ವಠಾರದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ” ಅಡಿಕೆ ಕೌಶಲ್ಯ ಪಡೆ ” ರಚನೆ ಆಗಿತ್ತು. ಅದೇ ಹುಮ್ಮಸ್ಸಿನಲ್ಲಿ ಮತ್ತೊಂದು ಶಿಬಿರ ನಡೆಯಿತು. ಎರಡೂ ಶಿಬಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದು ಇಡೀ ಜಿಲ್ಲೆಗೆ, ಅಡಿಕೆ ಬೆಳೆಗಾರರಿಗೆ ಉತ್ತಮ ಸಂದೇಶ ನೀಡಿತು. ಇದರ ಬೆನ್ನಲ್ಲೇ ಸಹಕಾರಿ ಸಂಘಗಳ ಮೂಲಕ ಜಿಲ್ಲೆಯಲ್ಲಿ ಇಂತಹ ಶಿಬಿರ ನಡೆಯುವ ಬಗ್ಗೆ ಯೋಚನೆ ಆರಂಭವಾಯಿತು. ಪೆರ್ಲದಲ್ಲಿ  ಸಹಕಾರಿ ಸಂಘದ ಮೂಲಕ  ಶಿ ಬಿರ ನಡೆದರೆ, ಈಗ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಶ್ರಯದಲ್ಲಿ ಶಿಬಿರ ನಡೆದರು ಶುಕ್ರವಾರ ಸಮಾರೋಪಗೊಂಡಿತು.

ಇದರ ಮರುದಿನವೇ ಸುದ್ದಿ ಬಂದಿದೆ, ಶಿಬಿರದಲ್ಲಿ ತರಬೇತಿ ಪಡೆದ ಯುವಕ ಗಣೇಶ್ ಪಣೆಮಜಲು ಎಂಬವರು ತೆಂಗಿನ ಕಾಯಿ ತೆಗೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಡಬದ ಅವರು ಈ ಹಿಂದೆಯೇ ಮರ ಏರುವ ಬಗ್ಗೆ ತಿಳಿದಿದ್ದರು. ಶಿಬಿರದಲ್ಲಿ ಅನುಭವ ಪಡೆದ ಬಳಿಕ ಇದೀಗ ಮತ್ತೆ ಧೈರ್ಯದಿಂದ ಮರ ಏರುವುದಕ್ಕೆ ಶುರು ಮಾಡಿದ್ದಾರೆ.

ಇದೀಗ ಪ್ರೇರಣೆ ಪಡೆದ ಇನ್ನೂ ಹಲವಾರು ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಗ್ರಾಮೀಣ ಭಾಗದಲ್ಲಿ ನುರಿತ ಕಾರ್ಮಿಕರ ತಯಾರು ಮಾಡುವುದು  ಹಾಗೂ ಸ್ವ ಉದ್ಯೋಗಕ್ಕೆ ಅವಕಾಶ ನೀಡುವುದು  ಈಗ ಮುಖ್ಯ ಉದ್ದೇಶವಾಗಿದೆ. ಇದೇ ಪ್ರೇರಣೆಯಲ್ಲಿ  ಸುಳ್ಯ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಆಸಕ್ತಿಯನ್ನು ವಹಿಸಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?
June 9, 2026
7:36 AM
by: ದ ರೂರಲ್ ಮಿರರ್.ಕಾಂ
ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror