ಶ್ರೀ ಚಕ್ರದ ಮಹತ್ವ ಬಗ್ಯೆ ಉಪನ್ಯಾಸ

October 6, 2019
6:14 PM

ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.

ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror