ಸಂಚಾರಿ ನಿಯಂತ್ರಣದಲ್ಲಿ ಸಮರ್ಥ ಸೇವೆ- ಗೃಹರಕ್ಷ ದಳದ ಪುಷ್ಪಾವತಿಗೆ ಸನ್ಮಾನ

November 1, 2019
9:16 PM

ಸುಳ್ಯ: ತುಂಬಿ ತುಳುಕುವ ಸುಳ್ಯ ನಗರದಲ್ಲಿ ವಾಹನ ಚಲಾಯಿಸುವುದು ಒಂದು ಸವಾಲು. ಅದೇ ರೀತಿ ದಿನಪೂರ್ತಿ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ನಿಯಂತ್ರಿಸುವುದು ನಿಜಕ್ಕೂ ಒಂದು ಸಾಹಸವೇ ಸರಿ. ಅಂತಹಾ ಸವಾಲಿನ ಕೆಲಸವನ್ನು ಅತ್ಯಂತ ಚಾಕಚಕ್ಯತೆಯಿಂದ, ಸಮರ್ಥವಾಗಿ ನಿಭಾಯಿಸುವವರು ಸುಳ್ಯದ ಗೃಹರಕ್ಷಕ ದಳದ ಸಿಬ್ಬಂದಿಗಳು. ಧೋ ಎಂದು ಸುರಿಯುವ ಮಳೆಯನ್ನೂ, ಸುಡು ಬಿಸಿಲನ್ನೂ ಲೆಕ್ಕಿಸದೆ ಸುಳ್ಯ ನಗರದ ವಾಹನ ಸಂಚಾರವನ್ನು ನಿಯಂತ್ರಿಸುವುದು ಮಹಿಳೆಯರೂ ಸೇರಿದ ಗೃಹ ರಕ್ಷಕ ದಳದ ಸಿಬ್ಬಂದಿಗಳು. ಅದರಲ್ಲೂ ಕಳೆದ ಹಲವು ವರ್ಷಗಳಿಂದ ವಾಹನ ಸಂಚಾರವನ್ನು ಸಮರ್ಥವಾಗಿ ನಿಯಂತ್ರಿಸುವವರು ಗೃಹರಕ್ಷಕ ದಳದ ಸಿಬ್ಬಂದಿ ಪುಷ್ಪಾವತಿ. ನ.ಒಂದರಂದು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಪುಷ್ಪಾವತಿ ಅವರ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಎಸ್‌.ಅಂಗಾರ ಸನ್ಮಾನ ನೆರವೇರಿಸಿ ಇವರ ಸೇವೆಯನ್ನು ಶ್ಲಾಘಿಸಿದರು.

ಸುಳ್ಯ ನಗರದಲ್ಲಿ ಅತ್ಯಂತ ವಾಹನ ದಟ್ಟಣೆ ಉಂಟಾಗುತ್ತಿರುವುದು ಕಟ್ಟೆಕ್ಕಾರ್ ವೃತ್ತ, ಜಟ್ಟಿಪಳ್ಳ ತಿರುವು,ಜ್ಯೂನಿಯರ್ ಕಾಲೇಜು ತಿರುವು ಮತ್ತು ಜ್ಯೋತಿ ವೃತ್ತದಲ್ಲಿ ಇಲ್ಲಿ ವಾಹನ ದಟ್ಟಣೆ ಉಂಟಾಗದಂತೆ, ಅಪಘಾತ ಅಥವಾ ಯಾವುದೇ ಸಮಸ್ಯೆ ಆಗದಂತೆ ಒಂದು ನಿಮಿಷವೂ ತಡ ಮಾಡದೆ ನಾಲ್ಕು ಕಡೆಗಳಿಂದ ಹರಿದು ಬರುವ ವಾಹನಗಳನ್ನು ಅತ್ಯಂತ ನಾಜೂಕಿನಿಂದ ನಿಯಂತ್ರಿಸುತ್ತಾರೆ ಸುಳ್ಯದ ಗೃಹ ರಕ್ಷಕ ದಳದ ಸಿಬ್ಬಂದಿಗಳು. ಉಳಿದ ಎಲ್ಲಾ ನಗರಗಳಲ್ಲಿಯೂ ಟ್ರಾಫಿಕ್ ಠಾಣೆಗಳಿದ್ದು ಟ್ರಾಫಿಕ್ ಪೊಲೀಸರೇ ವಾಹನ ಸಂಚಾರ ನಿಯಂತ್ರಿಸುತ್ತಾರೆ. ಆದರೆ ಸುಳ್ಯದಲ್ಲಿ ಸಂಚಾರಿ ಪೊಲೀಸ್ ಠಾಣೆ ಇಲ್ಲದ ಕಾರಣ ನಗರದ ಸಂಚಾರಿ ವ್ಯವಸ್ಥೆಯನ್ನು ಸುಳ್ಯ ಪೊಲೀಸ್ ಠಾಣೆಯಿಂದಲೇ ನಿಯಂತ್ರಿಸಲಾಗುತ್ತದೆ. ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗಳು ಸಂಚಾರಿ ಠಾಣೆಯ ಕೆಲಸವನ್ನು ನಿಭಾಯಿಸುತ್ತಾರೆ‌. ಆದುದರಿಂದಲೇ ಗೃಹರಕ್ಷಕ ದಳ ಸಿಬ್ಬಂದಿಗಳ ಪ್ರತಿನಿಧಿಯಾಗಿ ಹಲವು ವರ್ಷಗಳಿಂದ ಸಮರ್ಥವಾಗಿ ಸಂಚಾರಿ ನಿಯಂತ್ರಣವನ್ನು ನಿರ್ವಹಿಸುವ ಪುಷ್ಪಾವತಿಯವರಿಗೆ ತಾಲೂಕು ಆಡಳಿತ ಗೌರವ ಸಲ್ಲಿಸಿದೆ. ಆದುದರಿಂದ ರಾಜ್ಯೋತ್ಸವ ದಿನದ ಬಿಗ್ ಸಲ್ಯೂಟ್ ನಗರದ ಸಂಚಾರಿ ವ್ಯವಸ್ಥೆಯನ್ನು ನಿಯಂತ್ರಿಸುವ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗಿರಲಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ
“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror