ಸಂಪಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

November 24, 2019
10:02 PM

ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವು ನ. 24 ರಂದು ಸಂಪಾಜೆ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತೇಶ್ವರ ಎನ್.ಸಿ. ಅವರು ಕಾರ್ಯಕ್ರಮ ಉದ್ಘಾಟಿಸಿದರು. ನೇತಾಜಿ ಗೆಳೆಯರ ಬಳಗದ ಅಧ್ಯಕ್ಷ ಶಶಿಕುಮಾರ್ ಹೆಚ್.ಬಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಶಾಖೆಯ ಚೆಸ್ಕ್ ಕಿರಿಯ ಎಂಜಿನಿಯರ್ ಅನಿಲ್ ಕುಮಾರ್ ಕೆ.ಜಿ., ಸಂಪಾಜೆ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ಚರಣ್, ಎಪಿಎಂಸಿ ಸದಸ್ಯ ದೇವಪ್ಪ, ಸಂಪಾಜೆ ಗ್ರಾ. ಪಂ. ಸದಸ್ಯೆ ಗಿರಿಜಾ ಮೋಹನ್, ವರ್ತಕರಾದ ಇಸ್ಮಾಯಿಲ್ ಪಿ.ಕೆ., ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಚರಣ್ ಬಿ.ಜೆ., ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ಕೃಷ್ಣಪ್ಪ ಪಡ್ಪು ಉಪಸ್ಥಿತರಿದ್ದರು.

ಅಪರಾಹ್ನ ಸನ್ಮಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ನಡೆಯಿತು. ನೇತಾಜಿ ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷ ಪಿಎಲ್ ಸುರೇಶ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷ ಕುಮಾರ್ ಚಿದ್ಕಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೊಯಿದೀನ್ ಕುಂಞಿ ಎಸ್., ನೇತಾಜಿ ಗೆಳೆಯರ ಬಳಗದ ಸದಸ್ಯ ಉಮೇಶ್ ನಿಡುಬೆ ಉಪಸ್ಥಿತರಿದ್ದರು.

ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ವಾಸು ಕೊಯನಾಡು ಅವರು ಬಹುಮಾನ ವಿತರಿಸಿದರು. ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ್ ಕುಮಾರ್ ಎಚ್. ಬಿ. ಉಪಸ್ಥಿತರಿದ್ದರು. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸೆಲೆಸ್ಟಿನಾ ಲೋಬೊ ಅವರನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶಾಂತಕುಮಾರಿ ಚೆಡಾವು ಅವರು ಸನ್ಮಾನಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ
ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌
May 18, 2026
9:36 AM
by: ದ ರೂರಲ್ ಮಿರರ್.ಕಾಂ
ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror