ಸಂಪಾಜೆಯಲ್ಲಿ “ಸ್ವಚ್ಛ ಭಾರತ ಸಪ್ತಾಹ-2019” 

September 2, 2019
11:00 AM
ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಚೆಂಬು ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವುಗಳ ಸಂಯುಕ್ತಾಶ್ರಯದಲ್ಲಿ  “ಸ್ವಚ್ಛ ಭಾರತ ಸಪ್ತಾಹ-2019”  ಅಂಗವಾಗಿ ಸ್ವಚ್ಛತೆಯ ಕುರಿತು ಬೀದಿ ನಾಟಕ ಕಾರ್ಯಕ್ರಮ ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಚೆಂಬು ಗ್ರಾಪಂ ಅಧ್ಯಕ್ಷ  ದಿನೇಶ್ ಯು.ಕೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಪಾಜೆ ಎಜುಕೇಶನ್ ಸೊಸೈಟಿ ಸಂಚಾಲಕ ಶಂಕರನಾರಯಣ ಭಟ್ ವಹಿಸಿದ್ದರು. ಮುಖ್ಯಅತಿಥಿಗಳಾಗಿ ನೇತಾಜಿ ಗೆಳೆಯರ ಬಳಗ ಚೆಡಾವು ಇದರ ಸ್ಥಾಪಕ ಅಧ್ಯಕ್ಷ  ಸುರೇಶ್ ಪಿ.ಎಲ್,ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ  ಮಾಲತಿ ವೈ.ಕೆ,  ಸಂಯುಕ್ತ ಪ್ರೌಢ ಶಾಲೆ ಮುಖ್ಯ ಶಿಕ್ಷಕ  ಐತ್ತಪ್ಪ, ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ್ ಕುಮಾರ್ ಹೆಚ್.ಬಿ,,ರಾಷ್ಟ್ರೀಯ ಯುವ ಕಾರ್ಯಕರ್ತ  ಚರಣ್ ಬಿ.ಜೆ ಭಾಗವಹಿ‌ಸಿದ್ದರು.
ವೈ.ಕೆ ಮಾಲತಿ  ಸ್ವಾಗತಿಸಿ  ಪಿ.ಎಲ್ ಸುರೇಶ್ ವಂದಿಸಿದರು.  ಸಭಾಕಾರ್ಯಕ್ರಮದ ನಂತರ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ  ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ಸ್ವಚ್ಛತೆ ಕುರಿತು ಬೀದಿ ನಾಟಕ ಪ್ರದರ್ಶನ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror