ಸಂಬಂಧ

September 2, 2019
1:00 PM
ಒಣಗಿ ಹೋದ ಮರದ ಮೇಲೆ
ಕುಳಿತ ಪಕ್ಷಿಗೆ ಕಾಡುತ್ತಿದೆ ಚಿಂತೆ
ವಸಂತ ಮಾಸದಲ್ಲೂ ಮರದಲ್ಲಿ
ಚಿಗುರಿಲ್ಲವೆಂದು…
ಅದು ಬಯಸುತ್ತಿದೆ
ಹೂವಿನ ಘಮ,ಹಣ್ಣಿನ ಸ್ವಾದ
ಮತ್ತೆ ಬೇಕೆಂದು
ಅತ್ತು ಕರೆಯುತ್ತಿದೆ ಮಳೆರಾಯನ
ಬಂದು ಚಿಗುರಿಸಬಾರದೇ ಮರವನ್ನ?
ಆದರೆ ಪಕ್ಷಿಗೇನು ಗೊತ್ತು?
ಮರ ಸಾಯಲೆಂದು
ಬೇರಿಗೆ ವಿಷವುಣಿಸಿದ ಮನುಜನ ಮರ್ಮ!
ನೆರಳನುಣಿಸಿದ ಮರಕ್ಕೂ
ಗೊತ್ತಿಲ್ಲ ತಾನುಂಡಿದ್ದು ವಿಷವೆಂದು
ಸತ್ತ ಮರವೂ ಕಣ್ಣೀರಿಡುತ್ತಿದೆ
ಬಾರದ ಮಳೆಯ ಶಪಿಸುತ್ತಿದೆ
ಮರದ ಆಶ್ರಯ ಮರೆಯದ
ಪಕ್ಷಿ ಮತ್ತೆ ಹಾಡಲಾರಂಭಿಸಿದೆ
ಮರದ ನೋವ ಮರೆಸಲೆಂದು
ಎಂದೆಂದೂ ಜೊತೆ ನಾನಿರುವೆನೆಂದು…!
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಕಾಲದ ದೋಷವೇ..? ನಮ್ಮ ಮನಸ್ಸಿನ ದೋಷವೇ..?
February 10, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಹೊಸರುಚಿ | ಆರೋಗ್ಯಕರ ಗುಜ್ಜೆ ಕರಿ | ದೋಸೆ–ಚಪಾತಿಗೆ ಸೂಪರ್ ರುಚಿ
February 7, 2026
10:00 PM
by: ದಿವ್ಯ ಮಹೇಶ್
ದ್ವೇಷ ಬೆಂಕಿಯಾಗುತ್ತದೆ, ಕ್ಷಮೆ ಬೆಳಕಾಗುತ್ತದೆ
February 7, 2026
9:42 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮದುವೆ ಎಂದರೆ ಹೆದರಿಕೆ
February 5, 2026
10:03 PM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror