ಸಂಸದರ ಬೇಡಿಕೆಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿಯ ಪ್ರಸ್ತಾಪವಿಲ್ಲ : ನಿರಾಸೆ ವ್ಯಕ್ತಪಡಿಸಿದ ಕ್ರಿಯಾ ಸಮಿತಿ

June 28, 2019
7:02 AM

ಸುಳ್ಯ : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೇ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣದ ಕುರಿತು ಪ್ರಸ್ತಾಪಿಸದೇ ಇರುವುದಕ್ಕೆ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣ ಕ್ರಿಯಾ ಸಮಿತಿ ನಿರಾಸೆ ವ್ಯಕ್ತಪಡಿಸಿದೆ.

Advertisement
Advertisement
Advertisement
Advertisement

ಸುಳ್ಯದ ಜನತೆ ಬಲು ನಿರೀಕ್ಷೆಯಿಂದ ಕಾಯುತ್ತಿರುವ ಕನಸಿನ ಯೋಜನೆಯ ಕುರಿತು ಸಂಸದರ ಬೇಡಿಕೆಯಲ್ಲಿ ಒಂದು ವಾಕ್ಯವನ್ನೂ ಉಲ್ಲೇಖ ಮಾಡದೇ ಇದ್ದುದು ತೀವ್ರ ನಿರಾಸೆ ತಂದಿದೆ ಎಂದು ಕಾಞಂಗಾಡ್-ಕಾಣಿಯೂರು ರೈಲ್ವೇ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಬಿ.ಸುಧಾಕರ ರೈ ಹೇಳಿದ್ದಾರೆ. ಈ ಹಿಂದೆ ಸಂಸದರ ನೇತೃತ್ವದಲ್ಲಿಯೇ ಕ್ರಿಯಾ ಸಮಿತಿಯು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಆದರೆ ಈಗ ಹೊಸ ಸರಕಾರದ ನೂತನ ರೈಲ್ವೇ ಸಚಿವರಿಗೆ ಜಿಲ್ಲೆಯ ರೈಲ್ವೇ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುವಾಗ ಸಂಸದರು ಕಾಞಂಗಾಡ್-ಕಾಣಿಯೂರು ಹಳಿಯ ಬಗ್ಗೆ ಮರೆತರೇ ಎಂದು ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ.

Advertisement

ಮನವಿಯಲ್ಲಿ ಈ ಯೋಜನೆಯ ಪ್ರಸ್ತಾಪವನ್ನು ಬಿಟ್ಟಿರುವ ಬಗ್ಗೆ ಸಂಸದರ ಗಮನಕ್ಕೆ ತರಲಾಗುವುದು. ಅಲ್ಲದೆ ಈ ವಿಷಯವನ್ನು ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡರ ಗಮನಕ್ಕೆ ತರಲಾಗಿದ್ದು ಅದಕ್ಕೆ ಅವರು ತ್ವರಿತವಾಗಿ ಸ್ಪಂದಿಸಿದ್ದಾರೆ ಮತ್ತು ಕೇಂದ್ರ ರೈಲ್ವೇ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸುಧಾಕರ ರೈ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror