ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡದ ಬಗ್ಗೆ ಜನರ ಅಬೋಧ ಅವಸ್ಥೆ

Advertisement

ಸುಮಾರು ಅರ್ಧದಷ್ಟು ಯುವ ಮತ್ತು ಉದ್ಯಮಶೀಲ ಭಾರತೀಯರು ತಮಗಿರುವ ಸಕ್ಕರೆ ಕಾಯಿಲೆ ಮತ್ತು ಏರಿದ ರಕ್ತದೊತ್ತಡದ ಸ್ಥಿತಿಯ ಬಗ್ಗೆ ಅರಿವನ್ನೇ ಹೊಂದಿಲ್ಲ ಎಂದು ವರದಿಯೊಂದು ಹೇಳಿದೆ. ಇದರಿಂದಾಗಿ ಇವರು ವಿವಿಧ ರೀತಿಯ ಜಟಿಲ ಖಾಯಿಲೆಗಳಿಗೆ ತುತ್ತಾಗುತ್ತಾಇದ್ದಾರೆ ಎಂದು ಭಾರತೀಯ ಸಾರ್ವಜನಿಕ ಆರೋಗ್ಯ ಸಂಶೋಧನಾ ತಂಡದ ಅಭಿಪ್ರಾಯ.

Advertisement

ಅತಿಯಾದ ರಕ್ತದೊತ್ತಡ ಇರುವ 55 ಶೇಕಡಾ ಜನರಿಗೆ ತಮಗೆ ರಕ್ತದ ಒತ್ತಡ ಏರಿದ ಸ್ಥಿತಿ ಇದೆ ಎಂದು ತಿಳಿದೇ ಇಲ್ಲ. ಹಾಗೆಯೇ, ಏರಿದ ರಕ್ತದ ಸಕ್ಕರೆ ಅಂಶ 48 ಶೇಕಡಾ ಜನರಿಗೆ ತಾವು ಡಯಾಬಿಟಿಸ್ ರೋಗಿಗಳೆಂದು ತಿಳಿದಿಲ್ಲ. ಈ ಎರಡೂ ಸಂದರ್ಭಗಳು ಗ್ರಾಮೀಣ ಪ್ರದೇಶದಲ್ಲಿ ಕಂಡುಬರುತ್ತಿವೆ.
ರಾಜ್ಯಗಳನ್ನು ಹೆಸರಿಸುವುದಾದರೆ, ಚಿಕಿತ್ಸೆಗೆ ಒಳಪಡದ ಸಕ್ಕರೆ ಕಾಯಿಲೆ ರೋಗಿಗಳು ಅತ್ಯಂತ ಹೆಚ್ಚಾಗಿರುವ ರಾಜ್ಯಗಳೆಂದರೆ ತಮಿಳುನಾಡು ಮತ್ತು ಉತ್ತರ ಪ್ರದೇಶ. ಚಿಕಿತ್ಸೆಗೆ ಒಳಪಡದ ರಕ್ತದ ಒತ್ತಡ ಕಾಯಿಲೆಯ ರೋಗಿಗಳು ಅತ್ಯಂತ ಹೆಚ್ಚಾಗಿರುವ ರಾಜ್ಯಗಳೆಂದರೆ ಪುದುಚೇರಿ, ತಮಿಳುನಾಡು, ಸಿಕ್ಕಿಂ ಮತ್ತು ಹರಿಯಾಣ. ಅತ್ಯಂತ ಹೆಚ್ಚು ರೋಗಿಗಳು, ಈ ಕಾಯಿಲೆಗಳನ್ನು ಹೊಂದಿದ್ದರೂ, ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲ ಆಗಿದ್ದಾರೆ.
ಏಳು ಲಕ್ಷಕ್ಕೂ ಅಧಿಕ, 15ರಿಂದ 49 ವರ್ಷದ ವ್ಯಕ್ತಿಗಳನ್ನು ಅಧ್ಯಯನ ನಡೆಸಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೇಕ್ಷಣೆ-4 ರ 2015-16 ರ ಫಲಿತಾಂಶದ ಪ್ರಕಾರ ಈ ತೀರ್ಮಾನಗಳನ್ನು ಮಾಡಲಾಗಿದೆ.

Advertisement
Advertisement

ಭಾರತವು ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡವನ್ನು ಒಳಗೊಂಡಂತೆ, ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಹುದೊಡ್ಡ ಹೊರೆಯಿಂದ ಕುಸಿದು ಹೋಗುತ್ತಿದೆ. ಸಕ್ಕರೆ ಕಾಯಿಲೆ ನಿಯಂತ್ರಣದ ಪ್ರತಿಯೊಂದು ಹೆಜ್ಜೆಯಲ್ಲೂ ನ್ಯೂನತೆ ಉಂಟಾಗುತ್ತಿದೆ. ಅದರಲ್ಲೂ ಅರಿವು ಮೂಡಿಸುವ ಆರಂಭದ ಹೆಜ್ಜೆಗಳು ಭಾರತದಲ್ಲಿ ದುರ್ಬಲವಾಗಿವೆ ಎಂದು ಬಿ .ಎಂ .ಸಿ ಮೆಡಿಸಿನ್ ವರದಿ ಮಾಡಿದೆ.
ರಕ್ತದೊತ್ತಡದ ಬಗ್ಗೆ ಅರಿವನ್ನು ಹೊಂದಿ, ಚಿಕಿತ್ಸೆ ಪಡೆದು ನಿಯಂತ್ರಣ ಹೊಂದಿದವರ ಸಂಖ್ಯೆ ಕಡಿಮೆ. ಆದುದರಿಂದ ಹಳ್ಳಿ ಪ್ರದೇಶಗಳಲ್ಲಿ ಹಾಗೂ ಕಡಿಮೆ ಆದಾಯ ಹೊಂದಿರುವ ವರಲ್ಲಿ ಇದನ್ನು ಪತ್ತೆ ಹಚ್ಚುವ, ಜಾಗೃತಿ ಮೂಡಿಸುವ, ಚಿಕಿತ್ಸೆ ನೀಡುವ, ಮೌಲ್ಯಮಾಪನ ಮಾಡುವ ವ್ಯವಸ್ಥೆ ಮತ್ತು ಪ್ರಕ್ರಿಯೆಗಳು ತೀವ್ರವಾಗಿ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಪ್ಲೋಸ್ (PLoS) ಮೆಡಿಸಿನ್ ವರದಿಮಾಡಿದೆ. ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾ, ಜರ್ಮನಿಯ ಹೈಡೆಲ್ಬರ್ಗ್ ಯುನಿವರ್ಸಿಟಿ, ಯುಎಸ್ಎ ಬಾಸ್ಟನ್ ನ ಹಾರ್ವರ್ಡ್ ಟಿ ಎಚ್ ಚಾನ್ ಸ್ಕೂಲ್ ಆಫ್
ಪಬ್ಲಿಕ್- ಇವೆಲ್ಲದರ ತಜ್ಞರು ಸೇರಿಕೊಂಡು ಈ ಅಧ್ಯಯನ ನಡೆಸಿದ್ದಾರೆ.” ಗ್ರಾಮೀಣ ಪ್ರದೇಶಗಳಲ್ಲಿ ಪತ್ತೆಹಚ್ಚುವ ಹಾಗೂ ತಡೆಗಟ್ಟುವ ತಪಾಸಣೆಗಳು ಇಲ್ಲವೇ ಇಲ್ಲ. ಕಾಯಿಲೆ ಲಕ್ಷಣಗಳನ್ನು ಪ್ರಕಟಿಸಿದಾಗ ಅಥವಾ ಉಲ್ಬಣಾವಸ್ಥೆ ತಲುಪಿದಾಗ ಮಾತ್ರ ಜನರು ತಪಾಸಣೆಗೆ ಮುನ್ನುಗ್ಗುತ್ತಾರೆ. ಆದರೆ ಮಹಿಳೆಯರಲ್ಲಿ ಮಾತ್ರ ಪರಿಸ್ಥಿತಿ ಇಷ್ಟೊಂದು ಕೆಟ್ಟದಾಗಿಲ್ಲ. ಏಕೆಂದರೆ ಗರ್ಭಿಣಿಯರು ತಪಾಸಣೆಗೆ ಹೋದಾಗ ರಕ್ತದ ಸಕ್ಕರೆ ಹಾಗೂ ರಕ್ತದೊತ್ತಡವನ್ನು ಪರೀಕ್ಷಿಸಲಾಗುತ್ತದೆ. ಆದುದರಿಂದ ಮಹಿಳೆಯರಿಗಿಂತ ಪುರುಷರಲ್ಲಿ ಪತ್ತೆಯಾಗದ ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಸಂದರ್ಭಗಳು ಹೆಚ್ಚಾಗಿವೆ” ಎಂದು ಈ ಅಧ್ಯಯನಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ , ಪಿ .ಎಚ್ .ಎಫ್. ಐ. ಸಂಶೋಧಕರಾದ ಆಶಿಶ್ ಅವಸ್ಥಿ ತಿಳಿಸಿದ್ದಾರೆ.

 

Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

2 Comments on "ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡದ ಬಗ್ಗೆ ಜನರ ಅಬೋಧ ಅವಸ್ಥೆ"

  1. Venkatramana punacha | May 24, 2019 at 6:38 pm | Reply

    ಉತ್ತಮ ಬರಹ

  2. ಉತ್ತಮ ಬರಹ..ಜನಸಾಮಾನ್ಯರು ಮತ್ತು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳದಿದದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಕಾದಿದೆ..ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಯನ್ನು ಬಲಪಡಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯನಿರತವಾಗಬೇಕಾಗಿದೆ..

Leave a comment

Your email address will not be published.


*