ಸರಕಾರಿ ಶಾಲೆಗೆ ಶೇ.100 ಫಲಿತಾಂಶ : ಕ.ಸಾ.ಪ.ದಿಂದ ಅಭಿನಂದನೆ

Advertisement

ಸವಣೂರು: ಎಸ್ಸೆಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಪರವಾಗಿ ಶಾಲಾ ಮುಖ್ಯಗುರು ಯಶೋಧಾ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಲಾದ ಪುಸ್ತಕ ಮೇಳ, ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು ,ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ,ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಕ.ಸಾ.ಪ. ಪುತ್ತೂರು ಘಟಕದ ಗೌರವ ಕೋಶಾಧ್ಯಕ್ಷ ಎನ್.ಕೆ. ಜಗನ್ನಿವಾಸ್ ರಾವ್, ಘಟಕದ ಅಧ್ಯಕ್ಷ ಐತಪ್ಪ ನಾಯ್ಕ್ , ಕ.ಸಾ.ಪ. ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ , ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಸರಕಾರಿ ಶಾಲೆಗೆ ಶೇ.100 ಫಲಿತಾಂಶ : ಕ.ಸಾ.ಪ.ದಿಂದ ಅಭಿನಂದನೆ"

Leave a comment

Your email address will not be published.


*