ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗಾಂಧೀಜಯಂತಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದಿನಾಚರಣೆ

October 3, 2019
10:39 AM

ಕೊಡಗು ಚೆಂಬು:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗಾಂಧೀಜಯಂತಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದಿನಾಚರಣೆ. ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಕುರಿತು ಪ್ರತಿಜ್ಞಾ ವಿಧಿ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಸಭಾ,ಕಾರ್ಯಕ್ರಮದಲ್ಲಿ ಗ್ರಾ.ಪಂ. ಚೆಂಬು ಇದರ ಅಧ್ಯಕ್ಷರಾದ ಶ್ರೀಯುತ ದಿನೇಶ್ ಕುಮಾರ್ ಮಾತನಾಡಿ “ದೇಶ ಕಂಡ ಮಹಾನ್ ಕಣ್ಮಣಿಗಳಾದ ಈ ಇಬ್ಬರ ಆದರ್ಶ ತತ್ವ”ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾತನಾಡಿದರು. ಹಾಗೆಯೇ ವಿದ್ಯಾಭಿಮಾನಿಗಳಾದ ಶ್ರೀಯುತ ವಾಸುದೇವ ನಿಡಿಂಜಿ ಮಾತನಾಡಿ ” ಈ ಮಹಾನ್ ವ್ಯಕ್ತಿಗಳ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಂಡು ಅವರ ಧ್ಯೇಯ ವಾಕ್ಯಗಳೊಂದಿಗೆ ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ನಾವೆಲ್ಲಾರು ಪಾಲ್ಗೊಳ್ಳೋಣ” ಎಂದು ಹಿತನುಡಿದರು.
ಸಭೆಯಲ್ಲಿ ಎಸ್.ಡಿ.ಎಂ ಸಿ ಅಧ್ಯಕ್ಷರು ಶ್ರೀಯುತ ಗಣೇಶ ಪಿ.ಟಿ. , ಗ್ರಾ.ಪಂ.ಚೆಂಬು ಸದಸ್ಯೆ ಶ್ರೀಮತಿ ಲೀಲಾವತಿ ಯು.ಆರ್, ಮುಖ್ಯೋಪಾಧ್ಯಾಯರಾದ ಶ್ರೀಯುತ ಸೋಮಣ್ಣ ಕೆ.ಆರ್ ಹಾಗೂ ಎಸ್.ಡಿ.ಎಂ.ಸಿ. ಸರ್ವ ಸದಸ್ಯರುಗಳು, ಶಾಲಾ ಶಿಕ್ಷಕ-ಸಿಬ್ಬಂಧಿ ವೃಂಧ ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛ ಭಾರತ – ಗಾಂಧೀ ಕನಸಿನ ಅಂಗವಾಗಿ ಶಾಲೆಯ ಸುತ್ತಾ ಮುತ್ತಾ ಶ್ರಮದಾನ ಕಾರ್ಯವನ್ನು ಮಾಡಲಾಯಿತು. ಕಾರ್ಯಕ್ರಮವನ್ನು ಶ್ರೀ ವಿಕ್ರಾಂತ ಎಂ ಬಿ ಅ.ಶಿಕ್ಷಕರು ಸ್ವಾಗತಿಸಿ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror